<p><strong>ಜೈಪುರ: </strong>14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ನ್ಯಾಯಾಧೀಶ ಜಿತೇಂದ್ರ ಗುಲಿಯಾ ಅವರನ್ನು ಬಂಧಿಸಲಾಗಿದ್ದು, ಗುರುವಾರ ಭರತ್ಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಜೈಪುರದಲ್ಲಿ ಬಂಧಿಸಲ್ಪಟ್ಟ ಗುಲಿಯಾ ಅವರನ್ನು ಭರತ್ಪುರಕ್ಕೆ ಕರೆತಂದು, ಅಲ್ಲಿನ ಆರ್ಬಿಎಂ ಆಸ್ಪತ್ರೆಯಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಯಿತು.</p>.<p>14 ವರ್ಷದ ಸಂತ್ರಸ್ತ ಬಾಲಕ ಸಹ ಹೇಳಿಕೆ ನೀಡಲು ನ್ಯಾಯಾಲಯಕ್ಕೆ ತೆರಳಿದ್ದು, ಅನಾರೋಗ್ಯದ ಕಾರಣ, ಆತನನ್ನು ಆಸ್ಪತ್ರೆಗೆ ದಾಖಲಿಸಲು ನ್ಯಾಯಾಲಯ ಸೂಚಿಸಿದೆ.</p>.<p>ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಹಿಮಾಂಶು ಗುಪ್ತಾ ಮತ್ತು ಎಸ್ಪಿ ದೇವೇಂದ್ರ ವಿಷ್ಣೋಯ್ ಅವರು ಸಂತ್ರಸ್ತನ ಮನೆಗೆ ಭೇಟಿ ನೀಡಿದ್ದರು.</p>.<p>ನ್ಯಾಯಾಧೀಶರ ಕುಟುಂಬದವರು ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಬಾಲಕನ ಕುಟುಂಬಕ್ಕೆ ಭದ್ರತೆ ಒದಗಿಸಲಾಗಿದೆ.</p>.<p>ಪ್ರಕರಣದ ತನಿಖಾಧಿಕಾರಿ ಸತೀಶ್ ವರ್ಮಾ ಅವರು ಜೈಪುರದಿಂದ ನ್ಯಾಯಾಧೀಶರನ್ನು ಬಂಧಿಸಿ ಭರತ್ಪುರಕ್ಕೆ ಕರೆತಂದಿದ್ದಾರೆ ಎಂದು ಎಸ್ಪಿ ದೇವೇಂದ್ರ ವಿಷ್ಣೋಯ್ ಹೇಳಿದ್ದಾರೆ.</p>.<p>ಈ ಮಧ್ಯೆ, ಬಾಲಕ ಮತ್ತು ಅವರ ಕುಟುಂಬಕ್ಕೆ ಸಲಹೆಗಾರರನ್ನು ನೇಮಿಸಲಾಗಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ: </strong>14 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ನ್ಯಾಯಾಧೀಶ ಜಿತೇಂದ್ರ ಗುಲಿಯಾ ಅವರನ್ನು ಬಂಧಿಸಲಾಗಿದ್ದು, ಗುರುವಾರ ಭರತ್ಪುರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಜೈಪುರದಲ್ಲಿ ಬಂಧಿಸಲ್ಪಟ್ಟ ಗುಲಿಯಾ ಅವರನ್ನು ಭರತ್ಪುರಕ್ಕೆ ಕರೆತಂದು, ಅಲ್ಲಿನ ಆರ್ಬಿಎಂ ಆಸ್ಪತ್ರೆಯಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆಗಳನ್ನು ನಡೆಸಲಾಯಿತು.</p>.<p>14 ವರ್ಷದ ಸಂತ್ರಸ್ತ ಬಾಲಕ ಸಹ ಹೇಳಿಕೆ ನೀಡಲು ನ್ಯಾಯಾಲಯಕ್ಕೆ ತೆರಳಿದ್ದು, ಅನಾರೋಗ್ಯದ ಕಾರಣ, ಆತನನ್ನು ಆಸ್ಪತ್ರೆಗೆ ದಾಖಲಿಸಲು ನ್ಯಾಯಾಲಯ ಸೂಚಿಸಿದೆ.</p>.<p>ಇದಕ್ಕೂ ಮುನ್ನ ಜಿಲ್ಲಾಧಿಕಾರಿ ಹಿಮಾಂಶು ಗುಪ್ತಾ ಮತ್ತು ಎಸ್ಪಿ ದೇವೇಂದ್ರ ವಿಷ್ಣೋಯ್ ಅವರು ಸಂತ್ರಸ್ತನ ಮನೆಗೆ ಭೇಟಿ ನೀಡಿದ್ದರು.</p>.<p>ನ್ಯಾಯಾಧೀಶರ ಕುಟುಂಬದವರು ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ಬಾಲಕನ ಕುಟುಂಬಕ್ಕೆ ಭದ್ರತೆ ಒದಗಿಸಲಾಗಿದೆ.</p>.<p>ಪ್ರಕರಣದ ತನಿಖಾಧಿಕಾರಿ ಸತೀಶ್ ವರ್ಮಾ ಅವರು ಜೈಪುರದಿಂದ ನ್ಯಾಯಾಧೀಶರನ್ನು ಬಂಧಿಸಿ ಭರತ್ಪುರಕ್ಕೆ ಕರೆತಂದಿದ್ದಾರೆ ಎಂದು ಎಸ್ಪಿ ದೇವೇಂದ್ರ ವಿಷ್ಣೋಯ್ ಹೇಳಿದ್ದಾರೆ.</p>.<p>ಈ ಮಧ್ಯೆ, ಬಾಲಕ ಮತ್ತು ಅವರ ಕುಟುಂಬಕ್ಕೆ ಸಲಹೆಗಾರರನ್ನು ನೇಮಿಸಲಾಗಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>