ನ್ಯಾಯಮೂರ್ತಿ ಕೌಶಿಕ್ ಚಂದ ನೇತೃತ್ವದ ನ್ಯಾಯಪೀಠವು ಈ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ. ಆದರೆ, ನ್ಯಾಯಮೂರ್ತಿ ಕೌಶಿಕ್ ಚಂದ ಅವರು ಬಿಜೆಪಿಯ ಸಕ್ರಿಯ ಕಾರ್ಯಕರ್ತರೆಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಆ ಹಿನ್ನೆಲೆಯಲ್ಲಿ ತಕರಾರು ಅರ್ಜಿಯ ವಿಚಾರಣೆಯನ್ನು ಬೇರೆ ಪೀಠಕ್ಕೆ ವರ್ಗಾಯಿಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಒತ್ತಾಯಿಸಿದ್ದಾರೆ.