<p><strong>ನವದೆಹಲಿ: </strong>ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ನಿಷೇಧಸುವಂತೆ ಕೋರಿರುವ ಮೇಲ್ಮನವಿಯ ವಿಚಾರಣೆಯನ್ನು ಗುರುವಾರ ಪೂರ್ಣಗೊಳಿಸಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ತೀರ್ಪನ್ನು ಕಾಯ್ದಿರಿಸಿತು.</p>.<p>ಇಂಡಿಯನ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ನೆಟ್ವರ್ಕ್ ಸಂಸ್ಥೆ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ವೇಳೆ, ಪಟಾಕಿಯಿಂದ ಎದುರಾಗಲಿರುವ ದುಷ್ಪರಿಣಾಮಗಳ ಮಾಹಿತಿ ಪಡೆದ ನ್ಯಾಯಮೂರ್ತಿ ಆದರ್ಶಕುಮಾರ್ ಗೋಯೆಲ್ ನೇತೃತ್ವದ ಹಸಿರು ಪೀಠ, ಇದೇ 9ರಂದು ತೀರ್ಪು ಪ್ರಕಟಿಸುವುದಾಗಿ ತಿಳಿಸಿತು.</p>.<p>ವಾಯು ಮಾಲಿನ್ಯದಿಂದ ಕೋವಿಡ್ ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿವೆ. ಪಟಾಕಿಯ ಬಳಕೆಯು ವಾಯು ಮಾಲಿನ್ಯ ಹೆಚ್ಚಿಸಲಿದೆ ಎಂದು ನ್ಯಾಯಮಂಡಳಿ ನೇಮಿಸಿರುವ ಆಮಿಕಸ್ ಕ್ಯೂರಿ ತಂಡ ಪೀಠಕ್ಕೆ ಮಾಹಿತಿ ನೀಡಿತು.</p>.<p>ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸುವ ಮೂಲಕ ವಾಯು ಮಾಲಿನ್ಯಕ್ಕೆ ಕಡಿವಾಣ ಹಾಕಬಹುದು. ಪಟಾಕಿ ಬಳಸುವವರಿಗೆ ₹ 10,000 ದಂಡ ವಿಧಿಸಬೇಕು ಎಂದು ಹಿರಿಯ ವಕೀಲ ರಾಜ್ ಪಂಜ್ವಾನಿ ಅವರು ಪೀಠಕ್ಕೆ ತಿಳಿಸಿದರು.</p>.<p>ದೆಹಲಿ, ಹರಿಯಾಣ, ಉತ್ತರ ಪ್ರದೇಶಗಳಲ್ಲಿ ಪಟಾಕಿ ನಿಷೇಧಿಸಬೇಕು ಎಂದು ಕೋರಿ ಇಂಡಿಯನ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ನೆಟ್ವರ್ಕ್ ಸಂಸ್ಥೆ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿರುವ ಪೀಠವು, ವಾಯು ಮಾಲಿನ್ಯ ಅಧಿಕ ಪ್ರಮಾಣದಲ್ಲಿರುವ ಇತರ 18 ರಾಜ್ಯಗಳಿಗೂ ಬುಧವಾರ ನೋಟಿಸ್ ನೀಡಿತ್ತು.</p>.<p>ಕರ್ನಾಟಕದ ಬೆಂಗಳೂರು, ಹುಬ್ಬಳ್ಳಿ– ಧಾರವಾಡ, ಕಲಬುರ್ಗಿ ಹಾಗೂ ದಾವಣಗೆರೆ ನಗರಗಳಲ್ಲಿನ ಗಾಳಿಯ ಗುಣಮಟ್ಟ ಹದಗೆಟ್ಟಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿ ತಿಳಿಸಿದೆ.</p>.<p>ದೇಶದ 122 ನಗರಗಳಲ್ಲಿ ಮಾಲಿನ್ಯ ಹೆಚ್ಚುವ ಮೂಲಕ ಅಪಾಯಕಾರಿ ಪ್ರಮಾಣದಲ್ಲಿದೆ ಎಂಬ ಅಂಶವನ್ನು ಈ ವರದಿ ಬಹಿರಂಗಪಡಿಸಿದ್ದರಿಂದ ಹಸಿರು ಪೀಠವು ವಿಚಾರಣೆಯ ವ್ಯಾಪ್ತಿಯನ್ನು ವಿಸ್ತರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿ ನಿಷೇಧಸುವಂತೆ ಕೋರಿರುವ ಮೇಲ್ಮನವಿಯ ವಿಚಾರಣೆಯನ್ನು ಗುರುವಾರ ಪೂರ್ಣಗೊಳಿಸಿರುವ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ತೀರ್ಪನ್ನು ಕಾಯ್ದಿರಿಸಿತು.</p>.<p>ಇಂಡಿಯನ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ನೆಟ್ವರ್ಕ್ ಸಂಸ್ಥೆ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ವೇಳೆ, ಪಟಾಕಿಯಿಂದ ಎದುರಾಗಲಿರುವ ದುಷ್ಪರಿಣಾಮಗಳ ಮಾಹಿತಿ ಪಡೆದ ನ್ಯಾಯಮೂರ್ತಿ ಆದರ್ಶಕುಮಾರ್ ಗೋಯೆಲ್ ನೇತೃತ್ವದ ಹಸಿರು ಪೀಠ, ಇದೇ 9ರಂದು ತೀರ್ಪು ಪ್ರಕಟಿಸುವುದಾಗಿ ತಿಳಿಸಿತು.</p>.<p>ವಾಯು ಮಾಲಿನ್ಯದಿಂದ ಕೋವಿಡ್ ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿವೆ. ಪಟಾಕಿಯ ಬಳಕೆಯು ವಾಯು ಮಾಲಿನ್ಯ ಹೆಚ್ಚಿಸಲಿದೆ ಎಂದು ನ್ಯಾಯಮಂಡಳಿ ನೇಮಿಸಿರುವ ಆಮಿಕಸ್ ಕ್ಯೂರಿ ತಂಡ ಪೀಠಕ್ಕೆ ಮಾಹಿತಿ ನೀಡಿತು.</p>.<p>ಪಟಾಕಿಗಳ ಮಾರಾಟ ಮತ್ತು ಬಳಕೆಯನ್ನು ನಿಷೇಧಿಸುವ ಮೂಲಕ ವಾಯು ಮಾಲಿನ್ಯಕ್ಕೆ ಕಡಿವಾಣ ಹಾಕಬಹುದು. ಪಟಾಕಿ ಬಳಸುವವರಿಗೆ ₹ 10,000 ದಂಡ ವಿಧಿಸಬೇಕು ಎಂದು ಹಿರಿಯ ವಕೀಲ ರಾಜ್ ಪಂಜ್ವಾನಿ ಅವರು ಪೀಠಕ್ಕೆ ತಿಳಿಸಿದರು.</p>.<p>ದೆಹಲಿ, ಹರಿಯಾಣ, ಉತ್ತರ ಪ್ರದೇಶಗಳಲ್ಲಿ ಪಟಾಕಿ ನಿಷೇಧಿಸಬೇಕು ಎಂದು ಕೋರಿ ಇಂಡಿಯನ್ ಸೋಷಿಯಲ್ ರೆಸ್ಪಾನ್ಸಿಬಿಲಿಟಿ ನೆಟ್ವರ್ಕ್ ಸಂಸ್ಥೆ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿರುವ ಪೀಠವು, ವಾಯು ಮಾಲಿನ್ಯ ಅಧಿಕ ಪ್ರಮಾಣದಲ್ಲಿರುವ ಇತರ 18 ರಾಜ್ಯಗಳಿಗೂ ಬುಧವಾರ ನೋಟಿಸ್ ನೀಡಿತ್ತು.</p>.<p>ಕರ್ನಾಟಕದ ಬೆಂಗಳೂರು, ಹುಬ್ಬಳ್ಳಿ– ಧಾರವಾಡ, ಕಲಬುರ್ಗಿ ಹಾಗೂ ದಾವಣಗೆರೆ ನಗರಗಳಲ್ಲಿನ ಗಾಳಿಯ ಗುಣಮಟ್ಟ ಹದಗೆಟ್ಟಿದೆ ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ವರದಿ ತಿಳಿಸಿದೆ.</p>.<p>ದೇಶದ 122 ನಗರಗಳಲ್ಲಿ ಮಾಲಿನ್ಯ ಹೆಚ್ಚುವ ಮೂಲಕ ಅಪಾಯಕಾರಿ ಪ್ರಮಾಣದಲ್ಲಿದೆ ಎಂಬ ಅಂಶವನ್ನು ಈ ವರದಿ ಬಹಿರಂಗಪಡಿಸಿದ್ದರಿಂದ ಹಸಿರು ಪೀಠವು ವಿಚಾರಣೆಯ ವ್ಯಾಪ್ತಿಯನ್ನು ವಿಸ್ತರಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>