ದೆಹಲಿ ವಕೀಲರ ಸಂಘ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಜನ ನೋಡುತ್ತಿದ್ದಾರೆ. ನೀವು ಹೇಗೆ ಕೆಲಸ ನಿರ್ವಹಿಸುತ್ತೀರಿ? ಏನು ಮಾಡುತ್ತಿದ್ದೀರಿ? ನಿಮ್ಮ ತೀರ್ಪು ಹೇಗಿದೆ? ಇವೆಲ್ಲವನ್ನೂ ಗಮನಿಸುತ್ತಾರೆ. ಇವುಗಳ ಆಧಾರದಲ್ಲಿ ಅಭಿಪ್ರಾಯ ರೂಪಿಸುತ್ತಾರೆ. ಸಾಮಾಜಿಕ ಜಾಲತಾಣಗಳ ಈ ಕಾಲಘಟ್ಟದಲ್ಲಿ ಯಾರು ಏನನ್ನೂ ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ’ ಎಂದಿದ್ದಾರೆ.