<p><strong>ನವದೆಹಲಿ: </strong>‘ರೈಲು ನಿರ್ಗಮಿಸುವ ಮುನ್ನ 30 ಮತ್ತು 5 ನಿಮಿಷದ ನಡುವೆ ಸಿದ್ಧಪಡಿಸುವ ಸೀಟು ಕಾಯ್ದಿರಿಸಿದ ವಿವರಗಳ ಎರಡನೇ ಪಟ್ಟಿಯನ್ನು ಕೈಬಿಡಬೇಕು’ ಎಂದು ರೈಲ್ವೆ ಸಚಿವಾಲಯದ ಸಂಸದೀಯ ಸ್ಥಾಯಿ ಸಮಿತಿಯು ರೈಲ್ವೆ ಇಲಾಖೆಗೆ ಸಲಹೆ ಮಾಡಿದೆ.</p>.<p>ಸೀಟು ರದ್ಧತಿ ಆಧರಿಸಿ ಕಾಯ್ದಿ ರಿಸುವಿಕೆ (ಆರ್ಎಸಿ) ಮತ್ತು ನಿರೀಕ್ಷಣಾ ಪಟ್ಟಿಯಲ್ಲಿ ಸಾವಿರಾರು ಪ್ರಯಾಣಿಕರು ಇರುವಾಗ, 30–5 ನಿಮಿಷದ ಅವಧಿಯಲ್ಲಿ ಟಿಕೆಟ್ ಬುಕ್ಕಿಂಗ್ಗೆ ಯಾವುದೇ ತರ್ಕ ಇಲ್ಲ ಎಂದು ಸಮಿತಿ ಹೇಳಿದೆ. ಈ ಅವಧಿಯಲ್ಲಿ ಟಿಕೆಟ್ ಬುಕ್ಕಿಂಗ್ ಮಾಡಿದರೂ ಸೀಟು ಲಭ್ಯತೆ ಖಾತರಿಯಾಗುವ ಸಂಭವವೂ ಇರುವುದಿಲ್ಲ ಎಂದು ಪ್ರತಿಪಾದಿಸಿದೆ.</p>.<p>‘ರೈಲ್ವೆಯಲ್ಲಿ ಟಿಕೆಟ್ ಕಾಯ್ದಿರಿಸಿರುವ ವ್ಯವಸ್ಥೆ’ ಕುರಿತ ವರದಿಯಲ್ಲಿ ಸಮಿತಿಯು, ಅಲ್ಪಾವಧಿಯಲ್ಲಿ ಪ್ರಯಾಣ ಕಾರ್ಯಕ್ರಮ ನಿರ್ಧರಿಸುವವರಿಗೆ ಸದ್ಯಕ್ಕೆ ತತ್ಕಾಲ್ ಸೌಲಭ್ಯವಿದೆ. ರೈಲು ನಿರ್ಗಮನದ 4–5 ಗಂಟೆ ಮೊದಲು ಟಿಕೆಟ್ ಕಾಯ್ದಿರಿಸುವಿಕೆ ಕುರಿತಂತೆ ಮೊದಲ ಪಟ್ಟಿ ಸಿದ್ಧವಾದ ಬಳಿಕ ಖಾಲಿ ಉಳಿಯುವ ಎಲ್ಲ ಸೀಟುಗಳನ್ನು ಸ್ವಯಂ ಚಾಲಿತವಾಗಿ ಆರ್ಎಸಿ/ನಿರೀಕ್ಷಣಾ ಪಟ್ಟಿಯಲ್ಲಿ ಇರುವ ಪ್ರಯಾಣಿಕರಿಗೆ ಹಂಚಿಕೆ ಮಾಡಬೇಕು’ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>‘ರೈಲು ನಿರ್ಗಮಿಸುವ ಮುನ್ನ 30 ಮತ್ತು 5 ನಿಮಿಷದ ನಡುವೆ ಸಿದ್ಧಪಡಿಸುವ ಸೀಟು ಕಾಯ್ದಿರಿಸಿದ ವಿವರಗಳ ಎರಡನೇ ಪಟ್ಟಿಯನ್ನು ಕೈಬಿಡಬೇಕು’ ಎಂದು ರೈಲ್ವೆ ಸಚಿವಾಲಯದ ಸಂಸದೀಯ ಸ್ಥಾಯಿ ಸಮಿತಿಯು ರೈಲ್ವೆ ಇಲಾಖೆಗೆ ಸಲಹೆ ಮಾಡಿದೆ.</p>.<p>ಸೀಟು ರದ್ಧತಿ ಆಧರಿಸಿ ಕಾಯ್ದಿ ರಿಸುವಿಕೆ (ಆರ್ಎಸಿ) ಮತ್ತು ನಿರೀಕ್ಷಣಾ ಪಟ್ಟಿಯಲ್ಲಿ ಸಾವಿರಾರು ಪ್ರಯಾಣಿಕರು ಇರುವಾಗ, 30–5 ನಿಮಿಷದ ಅವಧಿಯಲ್ಲಿ ಟಿಕೆಟ್ ಬುಕ್ಕಿಂಗ್ಗೆ ಯಾವುದೇ ತರ್ಕ ಇಲ್ಲ ಎಂದು ಸಮಿತಿ ಹೇಳಿದೆ. ಈ ಅವಧಿಯಲ್ಲಿ ಟಿಕೆಟ್ ಬುಕ್ಕಿಂಗ್ ಮಾಡಿದರೂ ಸೀಟು ಲಭ್ಯತೆ ಖಾತರಿಯಾಗುವ ಸಂಭವವೂ ಇರುವುದಿಲ್ಲ ಎಂದು ಪ್ರತಿಪಾದಿಸಿದೆ.</p>.<p>‘ರೈಲ್ವೆಯಲ್ಲಿ ಟಿಕೆಟ್ ಕಾಯ್ದಿರಿಸಿರುವ ವ್ಯವಸ್ಥೆ’ ಕುರಿತ ವರದಿಯಲ್ಲಿ ಸಮಿತಿಯು, ಅಲ್ಪಾವಧಿಯಲ್ಲಿ ಪ್ರಯಾಣ ಕಾರ್ಯಕ್ರಮ ನಿರ್ಧರಿಸುವವರಿಗೆ ಸದ್ಯಕ್ಕೆ ತತ್ಕಾಲ್ ಸೌಲಭ್ಯವಿದೆ. ರೈಲು ನಿರ್ಗಮನದ 4–5 ಗಂಟೆ ಮೊದಲು ಟಿಕೆಟ್ ಕಾಯ್ದಿರಿಸುವಿಕೆ ಕುರಿತಂತೆ ಮೊದಲ ಪಟ್ಟಿ ಸಿದ್ಧವಾದ ಬಳಿಕ ಖಾಲಿ ಉಳಿಯುವ ಎಲ್ಲ ಸೀಟುಗಳನ್ನು ಸ್ವಯಂ ಚಾಲಿತವಾಗಿ ಆರ್ಎಸಿ/ನಿರೀಕ್ಷಣಾ ಪಟ್ಟಿಯಲ್ಲಿ ಇರುವ ಪ್ರಯಾಣಿಕರಿಗೆ ಹಂಚಿಕೆ ಮಾಡಬೇಕು’ ಎಂದು ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>