<p>ನವದೆಹಲಿ: ಸೆಂಟ್ರಲ್ ವಿಸ್ತಾ ಯೋಜನೆಯಡಿ ಜಮೀನಿನ ಬಳಕೆ ಕುರಿತಂತೆ ಸುಪ್ರೀಂಕೋರ್ಟ್ನ ತ್ರಿಸದಸ್ಯ ಪೀಠದದಲ್ಲಿರುವ ನ್ಯಾಯಮೂರ್ತಿ ಸಂಜೀವ್ ಖನ್ನಾ ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದರು.</p>.<p>ಪರಂಪರೆ ಸಂರಕ್ಷಣಾ ಸಮಿತಿ, ತಜ್ಞರ ಸಮಿತಿಯು ಈ ಯೋಜನೆಗೆ ಅನುಮೋದನೆ ನೀಡುವ ಮುನ್ನ ಜನರ ಅಭಿಪ್ರಾಯಗಳನ್ನು ಪರಿಗಣಿಸಬೇಕಿತ್ತು ಎಂದು ನ್ಯಾಯಮೂರ್ತಿ ಖನ್ನಾ ಪ್ರತಿಪಾದಿಸಿದರು.</p>.<p>ಸೆಂಟ್ರಲ್ ವಿಸ್ತಾ ಯೋಜನೆಗೆ ಕೇಂದ್ರ ಸರ್ಕಾರ ನೀಡಿದ್ದ ಅಧಿಸೂಚನೆ ಮತ್ತು ಪರಿಸರ ಇಲಾಖೆ ಅನುಮತಿ ನೀಡಿದ್ದನ್ನು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ ಎ.ಎಂ.ಖಾನ್ವೀಲ್ಕರ್ ನೇತೃತ್ವದ ತ್ರಿಸದಸ್ಯ ಪೀಠ 2:1 ಬಹುಮತದೊಂದಿಗೆ ಮಂಗಳವಾರ ಎತ್ತಿ ಹಿಡಿದಿದೆ. ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಈ ನ್ಯಾಯಪೀಠದ ಮತ್ತೊಬ್ಬ ಸದಸ್ಯ.</p>.<p>‘ಈ ಯೋಜನೆಗೆ ಬಳಸಲು ಉದ್ದೇಶಿಸಿದ ಜಮೀನಿನ ವಿವರ, ನಿವೇಶನಗಳ ಸಂಖ್ಯೆಗಳನ್ನು ಒಳಗೊಂಡ ಅಧಿಸೂಚನೆಯನ್ನು ಬಹಿರಂಗಗೊಳಿಸಿದರೆ ಸಾಲದು. ಸ್ವಾಧೀನಪಡಿಸಿಕೊಂಡ ಜಾಗವನ್ನು ಹೇಗೆ ಅಭಿವೃದ್ಧಿ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಸಹ ಬಹಿರಂಗಗೊಳಿಸಬೇಕಿತ್ತು’ ಎಂದು ನ್ಯಾ.ಖನ್ನಾ ಹೇಳಿದರು.</p>.<p>‘ಯೋಜನೆ ಕುರಿತ ಸಮಗ್ರ ಮಾಹಿತಿಯನ್ನು ಜನರ ಮುಂದಿಡುವುದರಿಂದ, ಅವರಿಗೂ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಸಾಧ್ಯವಾಗುತ್ತಿತ್ತು. ಯೋಜನೆ ಅನುಷ್ಠಾನ ಪ್ರಕ್ರಿಯೆ ಯಾಂತ್ರಿಕವಾಗಿರದೇ, ಹೆಚ್ಚು ರಚನಾತ್ಮಕವಾಗಿರುತ್ತಿತ್ತು’ ಎಂದೂ ಹೇಳಿದರು.</p>.<p>‘ಸೆಂಟ್ರಲ್ ವಿಸ್ತಾ ನಿರ್ಮಾಣಕ್ಕೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿಯನ್ನು ತಿಳಿದುಕೊಳ್ಳುವ ಹಕ್ಕು ಜನರಿಗಿದೆ. ತಮ್ಮ ಅಭಿಪ್ರಾಯಗಳನ್ನು ಹೇಳಲು, ಸಲಹೆ–ಸೂಚನೆಗಳನ್ನು ನೀಡಲು ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸಲು ಸಹ ಜನರಿಗೆ ಹಕ್ಕಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ: ಸೆಂಟ್ರಲ್ ವಿಸ್ತಾ ಯೋಜನೆಯಡಿ ಜಮೀನಿನ ಬಳಕೆ ಕುರಿತಂತೆ ಸುಪ್ರೀಂಕೋರ್ಟ್ನ ತ್ರಿಸದಸ್ಯ ಪೀಠದದಲ್ಲಿರುವ ನ್ಯಾಯಮೂರ್ತಿ ಸಂಜೀವ್ ಖನ್ನಾ ತಮ್ಮ ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದರು.</p>.<p>ಪರಂಪರೆ ಸಂರಕ್ಷಣಾ ಸಮಿತಿ, ತಜ್ಞರ ಸಮಿತಿಯು ಈ ಯೋಜನೆಗೆ ಅನುಮೋದನೆ ನೀಡುವ ಮುನ್ನ ಜನರ ಅಭಿಪ್ರಾಯಗಳನ್ನು ಪರಿಗಣಿಸಬೇಕಿತ್ತು ಎಂದು ನ್ಯಾಯಮೂರ್ತಿ ಖನ್ನಾ ಪ್ರತಿಪಾದಿಸಿದರು.</p>.<p>ಸೆಂಟ್ರಲ್ ವಿಸ್ತಾ ಯೋಜನೆಗೆ ಕೇಂದ್ರ ಸರ್ಕಾರ ನೀಡಿದ್ದ ಅಧಿಸೂಚನೆ ಮತ್ತು ಪರಿಸರ ಇಲಾಖೆ ಅನುಮತಿ ನೀಡಿದ್ದನ್ನು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿ ಎ.ಎಂ.ಖಾನ್ವೀಲ್ಕರ್ ನೇತೃತ್ವದ ತ್ರಿಸದಸ್ಯ ಪೀಠ 2:1 ಬಹುಮತದೊಂದಿಗೆ ಮಂಗಳವಾರ ಎತ್ತಿ ಹಿಡಿದಿದೆ. ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಈ ನ್ಯಾಯಪೀಠದ ಮತ್ತೊಬ್ಬ ಸದಸ್ಯ.</p>.<p>‘ಈ ಯೋಜನೆಗೆ ಬಳಸಲು ಉದ್ದೇಶಿಸಿದ ಜಮೀನಿನ ವಿವರ, ನಿವೇಶನಗಳ ಸಂಖ್ಯೆಗಳನ್ನು ಒಳಗೊಂಡ ಅಧಿಸೂಚನೆಯನ್ನು ಬಹಿರಂಗಗೊಳಿಸಿದರೆ ಸಾಲದು. ಸ್ವಾಧೀನಪಡಿಸಿಕೊಂಡ ಜಾಗವನ್ನು ಹೇಗೆ ಅಭಿವೃದ್ಧಿ ಮಾಡಲಾಗುತ್ತದೆ ಎಂಬ ಮಾಹಿತಿಯನ್ನು ಸಹ ಬಹಿರಂಗಗೊಳಿಸಬೇಕಿತ್ತು’ ಎಂದು ನ್ಯಾ.ಖನ್ನಾ ಹೇಳಿದರು.</p>.<p>‘ಯೋಜನೆ ಕುರಿತ ಸಮಗ್ರ ಮಾಹಿತಿಯನ್ನು ಜನರ ಮುಂದಿಡುವುದರಿಂದ, ಅವರಿಗೂ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಸಾಧ್ಯವಾಗುತ್ತಿತ್ತು. ಯೋಜನೆ ಅನುಷ್ಠಾನ ಪ್ರಕ್ರಿಯೆ ಯಾಂತ್ರಿಕವಾಗಿರದೇ, ಹೆಚ್ಚು ರಚನಾತ್ಮಕವಾಗಿರುತ್ತಿತ್ತು’ ಎಂದೂ ಹೇಳಿದರು.</p>.<p>‘ಸೆಂಟ್ರಲ್ ವಿಸ್ತಾ ನಿರ್ಮಾಣಕ್ಕೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿಯನ್ನು ತಿಳಿದುಕೊಳ್ಳುವ ಹಕ್ಕು ಜನರಿಗಿದೆ. ತಮ್ಮ ಅಭಿಪ್ರಾಯಗಳನ್ನು ಹೇಳಲು, ಸಲಹೆ–ಸೂಚನೆಗಳನ್ನು ನೀಡಲು ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸಲು ಸಹ ಜನರಿಗೆ ಹಕ್ಕಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>