<p><strong>ನವದೆಹಲಿ:</strong> ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್ ಅವರನ್ನು ಭಾರತದ ಮುಖ್ಯನ್ಯಾಯಮೂರ್ತಿಯನ್ನಾಗಿ ಸೋಮವಾರ ನೇಮಕ ಮಾಡಿದ್ದಾರೆ.</p>.<p>ಈ ನೇಮಕಾತಿಯೂ ನವೆಂಬರ್ 9, 2022 ರಿಂದ ಜಾರಿಗೆ ಬರಲಿದ್ದು, ಅಂದು ಅವರು ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.</p>.<p>ಮುಖ್ಯನ್ಯಾಯಮೂರ್ತಿ ಯು ಯು ಲಲಿತ್ ಅವರು ಅಕ್ಟೋಬರ್ 11ರಂದು ನ್ಯಾ. ಚಂದ್ರಚೂಡ್ ಅವರನ್ನು ಮುಖ್ಯನ್ಯಾಯಮೂರ್ತಿ ಸ್ಥಾನಕ್ಕೆ ಶಿಫಾರಸು ಮಾಡಿದ್ದರು. ಈ ಶಿಫಾರಸ್ಸನ್ನು ರಾಷ್ಟ್ರಪತಿಗಳು ಅನುಮೋದಿಸಿದ್ದಾರೆ. ಚಂದ್ರಚೂಡ್ ಅವರ ಅವಧಿಯು 2024ರ ನವೆಂಬರ್ 10 ರವರೆಗೆ ಇರಲಿದೆ.</p>.<p>ಮುಂದಿನ ಸಿಜೆಐ ಆಗಿ ನೇಮಕಗೊಂಡ ನ್ಯಾಯಮೂರ್ತಿ ಚಂದ್ರಚೂಡ್ ಅವರನ್ನು ಕೇಂದ್ರ ಕಾನೂನು ಮತ್ತು ನ್ಯಾಯಮೂರ್ತಿ ಕಿರಣ್ ರಿಜಿಜು ಅಭಿನಂದಿಸಿದ್ದಾರೆ.</p>.<p>ಭಾರತದ ಸಂವಿಧಾನವು ನೀಡಿರುವ ಅಧಿಕಾರದನ್ವಯ ರಾಷ್ಟ್ರಪತಿಗಳು ನ್ಯಾ. ಚಂದ್ರಚೂಡ್ ಅವರನ್ನು ನವೆಂಬರ್ 9ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಾಧೀಶರನ್ನಾಗಿ ನೇಮಿಸಿದ್ದಾರೆ. ಅವರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ನ್ಯಾಯಮೂರ್ತಿ ಧನಂಜಯ ವೈ ಚಂದ್ರಚೂಡ್ ಅವರನ್ನು ಭಾರತದ ಮುಖ್ಯನ್ಯಾಯಮೂರ್ತಿಯನ್ನಾಗಿ ಸೋಮವಾರ ನೇಮಕ ಮಾಡಿದ್ದಾರೆ.</p>.<p>ಈ ನೇಮಕಾತಿಯೂ ನವೆಂಬರ್ 9, 2022 ರಿಂದ ಜಾರಿಗೆ ಬರಲಿದ್ದು, ಅಂದು ಅವರು ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.</p>.<p>ಮುಖ್ಯನ್ಯಾಯಮೂರ್ತಿ ಯು ಯು ಲಲಿತ್ ಅವರು ಅಕ್ಟೋಬರ್ 11ರಂದು ನ್ಯಾ. ಚಂದ್ರಚೂಡ್ ಅವರನ್ನು ಮುಖ್ಯನ್ಯಾಯಮೂರ್ತಿ ಸ್ಥಾನಕ್ಕೆ ಶಿಫಾರಸು ಮಾಡಿದ್ದರು. ಈ ಶಿಫಾರಸ್ಸನ್ನು ರಾಷ್ಟ್ರಪತಿಗಳು ಅನುಮೋದಿಸಿದ್ದಾರೆ. ಚಂದ್ರಚೂಡ್ ಅವರ ಅವಧಿಯು 2024ರ ನವೆಂಬರ್ 10 ರವರೆಗೆ ಇರಲಿದೆ.</p>.<p>ಮುಂದಿನ ಸಿಜೆಐ ಆಗಿ ನೇಮಕಗೊಂಡ ನ್ಯಾಯಮೂರ್ತಿ ಚಂದ್ರಚೂಡ್ ಅವರನ್ನು ಕೇಂದ್ರ ಕಾನೂನು ಮತ್ತು ನ್ಯಾಯಮೂರ್ತಿ ಕಿರಣ್ ರಿಜಿಜು ಅಭಿನಂದಿಸಿದ್ದಾರೆ.</p>.<p>ಭಾರತದ ಸಂವಿಧಾನವು ನೀಡಿರುವ ಅಧಿಕಾರದನ್ವಯ ರಾಷ್ಟ್ರಪತಿಗಳು ನ್ಯಾ. ಚಂದ್ರಚೂಡ್ ಅವರನ್ನು ನವೆಂಬರ್ 9ರಿಂದ ಜಾರಿಗೆ ಬರುವಂತೆ ಭಾರತದ ಮುಖ್ಯ ನ್ಯಾಯಾಧೀಶರನ್ನಾಗಿ ನೇಮಿಸಿದ್ದಾರೆ. ಅವರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>