ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸುಪ್ರೀಂ’ನಲ್ಲಿ ಒಬ್ಬರೇ ಮಹಿಳಾ ನ್ಯಾಯಮೂರ್ತಿ, ಆತ್ಮಾವಲೋಕನ ಅಗತ್ಯ: ವೈಚಂದ್ರಚೂಡ್

Last Updated 13 ಮಾರ್ಚ್ 2021, 21:01 IST
ಅಕ್ಷರ ಗಾತ್ರ

ನವದೆಹಲಿ: ‘ಸುಪ್ರೀಂ ಕೋರ್ಟ್‌ನಲ್ಲಿ ಸದ್ಯ ಒಬ್ಬರೇ ಮಹಿಳಾ ನ್ಯಾಯಮೂರ್ತಿ ಇದ್ದಾರೆ. ಇದು, ಕಳವಳದ ಸಂಗತಿ. ಈ ಬಗ್ಗೆ ಗಂಭೀರವಾದ ಆತ್ಮಾವಲೋಕನ ಅಗತ್ಯ’ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಡಿ.ವೈಚಂದ್ರಚೂಡ್ ಹೇಳಿದರು.

ವಕೀಲಿ ವೃತ್ತಿಯಿಂದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಯಾಗಿ ಮೊದಲಿಗೆ ನೇಮಕವಾಗಿದ್ದ ಇಂದು ಮಲ್ಹೋತ್ರಾ ಅವರು ನಿವೃತ್ತಿ ಹಿನ್ನೆಲೆಯಲ್ಲಿ ಯುವ ವಕೀಲರ ವೇದಿಕೆ ಆಯೋಜಿಸಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನ್ಯಾಯಮೂರ್ತಿ ಇಂದು ಮಲ್ಹೋತ್ರಾ ನಿವೃತ್ತಿ ಆಗುತ್ತಿದ್ದಾರೆ ಎಂದರೆ, ಉಳಿದಂತೆ ಒಬ್ಬರು ಮಹಿಳಾ ನ್ಯಾಯಮೂರ್ತಿಯಷ್ಟೇ ಉಳಿಯುತ್ತಾರೆ. ಒಂದು ಸಂಸ್ಥೆಯಾಗಿ ಇದೊಂದು ಆತ್ಮಾವಲೋಕನ ಮಾಡಿಕೊಳ್ಳಬೇಕಾದ ಸಂಗತಿ ಎಂದು ಹೇಳಿದರು.

ದೇಶದ ವೈವಿಧ್ಯಯತೆಯು ಕೋರ್ಟ್‌ನಲ್ಲಿಯೂ ಬಿಂಬಿತವಾಗುವಂತೆ ನೋಡಿಕೊಳ್ಳಬೇಕು. ಇಂಥ ಕ್ರಮಗಳು ಸಂಸ್ಥೆಯ ಬಗೆಗೆ ಸಾರ್ವಜನಿಕರಲ್ಲೂ ವಿಶ್ವಾಸಾರ್ಹತೆಯನ್ನು ಹೆಚ್ಚಿಸಲಿವೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮಾತನಾಡಿದ ಇಂದು ಮಲ್ಹೋತ್ರಾ ಅವರು, ಒಬ್ಬ ವಕೀಲರಾಗಿ ಉನ್ನತ ವೃತ್ತಿಪರತೆ ಕಾಯ್ದುಕೊಳ್ಳುವುದು ಈಗಿನ ಅಗತ್ಯ ಎಂದು ಸಲಹೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT