ಹೈದರಾಬಾದ್: ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಪಕ್ಷದ ಹೆಸರನ್ನು ಭಾರತ ರಾಷ್ಟ್ರ ಸಮಿತಿ (ಬಿಆರ್ಎಸ್) ಎಂದು ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಬದಲಾಯಿಸಿದ್ದಾರೆ.
ಈ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಕಾಲಿಡಲು ಕೆಸಿಆರ್ ಸಜ್ಜಾಗಿದ್ದಾರೆ.
ಪಕ್ಷದ ಸಾಮಾನ್ಯ ಸಭೆಯಲ್ಲಿ ಪಕ್ಷದ ಮರುನಾಮಕರಣದ ನಿರ್ಣಯವನ್ನು ಅಂಗೀಕರಿಸಲಾಯಿತು. ಈ ವೇಳೆ ಪಕ್ಷದ ಬೆಂಬಲಿಗರು ಪಟಾಕಿ ಸಿಡಿಸಿ, ಕೆಸಿಆರ್ ಪರ ಘೋಷಣೆ ಕೂಗಿ ಸಂಭ್ರಮವನ್ನು ಆಚರಿಸಿದರು.
ಟಿಆರ್ಎಸ್ ಇನ್ನು ಮುಂದೆ ಬಿಆರ್ಎಸ್ ಪಕ್ಷವಾಗಿ ಗುರುತಿಸಿಕೊಳ್ಳಲಿದೆ ಎಂದು ಚಂದ್ರಶೇಖರ್ ತಿಳಿಸಿದ್ದಾರೆ. 'ರಾಷ್ಟ್ರೀಯ ನಾಯಕ ಕೆಸಿಆರ್ ಜಿಂದಾಬಾದ್' ಇತ್ಯಾದಿ ಜಯಘೋಷವನ್ನು ಬೆಂಬಲಿಗರು ಕೂಗಿದರು.
Hyderabad | TRS president and CM KC Rao speaks at the party's general body meeting in Telangana Bhavan as the party has been renamed 'Bharat Rashtra Samithi' (BRS) pic.twitter.com/eBteol2Cih