<p><strong>ರಾಯ್ಪುರ:</strong> ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ಅವರನ್ನು ಛತ್ತೀಸ್ಗಡದ ರಾಯ್ಪುರ ಜಿಲ್ಲೆಯ ಕೋರ್ಟ್ ಜನವರಿ 13ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.</p>.<p>ಕಾಳಿಚರಣ್ ಬಂಧನಕ್ಕೆ ಸಂಬಂಧಿಸಿ ಮಧ್ಯಪ್ರದೇಶದ ಬಿಜೆಪಿ ಸರ್ಕಾರ ಮತ್ತು ಛತ್ತೀಸ್ಗಡದ ಕಾಂಗ್ರೆಸ್ ಸರ್ಕಾರದ ನಡುವೆ ವಾಗ್ವಾದ ಏರ್ಪಟ್ಟಿದೆ. 'ಛತ್ತೀಸ್ಗಡ ಪೊಲೀಸರು ಕಾಳಿಚರಣ್ ವಿರುದ್ಧದ ಕ್ರಮದ ಬಗ್ಗೆ ಸುಳಿವು ನೀಡಿಲ್ಲ' ಎಂದು ಮಧ್ಯಪ್ರದೇಶ ಸರ್ಕಾರ ಆರೋಪಿಸಿದೆ.</p>.<p>ಮಹಾತ್ಮ ಗಾಂಧಿ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮತ್ತು ನಾಥುರಾಮ್ ಗೋಡ್ಸೆಯನ್ನು ಶ್ಲಾಘಿಸಿದ ಪ್ರಕರಣಕ್ಕೆ ಸಂಬಂಧಿಸಿ ಛತ್ತೀಸ್ಗಡ ಪೊಲೀಸರು ಕಾಳಿಚರಣ್ ಮಹಾರಾಜ್ ಅವರನ್ನು ಗುರುವಾರ ಬೆಳಗ್ಗೆ ಬಂಧಿಸಿದ್ದರು. ಬಳಿಕ ರಾಯ್ಪುರ ಕೋರ್ಟ್ ಕಾಳಿಚರಣ್ ಅವರನ್ನು 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು.</p>.<p><a href="https://www.prajavani.net/india-news/will-give-rs-22l-to-police-officer-if-owaisi-arrested-announce-right-wing-members-897834.html" itemprop="url">ಗುರುಗ್ರಾಮ್: ಓವೈಸಿ ಬಂಧಿಸಿದರೆ ₹22 ಲಕ್ಷ ಬಹುಮಾನ ಘೋಷಿಸಿದ ಬಲಪಂಥೀಯ ಸಂಘಟನೆಗಳು </a></p>.<p>ಪೊಲೀಸ್ ಕಸ್ಟಡಿಯಲ್ಲಿದ್ದ ಕಾಳಿಚರಣ್ ಅವರನ್ನು ಪ್ರಶ್ನಿಸಲಾಗಿದೆ. ಹೆಚ್ಚಿನ ವಿಚಾರಣೆ ನಡೆಸುವ ಅಗತ್ಯವಿಲ್ಲ ಎಂದು ಪೊಲೀಸರು ಶುಕ್ರವಾರ ಕೋರ್ಟ್ಗೆ ಹೇಳಿದ್ದಾರೆ.</p>.<p>ಮಹಾತ್ಮ ಗಾಂಧಿ ವಿರುದ್ಧ ಆಕ್ಷೇಪಾರ್ಹ ಪದ ಬಳಕೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾದ ಬೆನ್ನಲ್ಲೇ ರಾಯ್ಪುರ ಪೊಲೀಸರು ಗುರುವಾರ ಬೆಳಗ್ಗೆ ಕಾಳಿಚರಣ್ ಅವರನ್ನು ಮಧ್ಯಪ್ರದೇಶದ ಕಜುರಾಹೋ ನಗರದಿಂದ 25 ಕಿ.ಮೀ. ದೂರದ ಭಾಗೇಶ್ವರ್ ಧಾಮ್ನಲ್ಲಿ ಬಂಧಿಸಿದ್ದರು.</p>.<p>ರಾಯ್ಪುರದಲ್ಲಿ ಡಿಸೆಂಬರ್ 26ರಂದು ಭಾನುವಾರ ನಡೆದ ಧರ್ಮ ಸಂಸತ್ನಲ್ಲಿ ಮಹಾತ್ಮ ಗಾಂಧಿ ವಿರುದ್ಧ ಆಕ್ಷೇಪಾರ್ಹ ಪದ ಬಳಸಲಾಗಿತ್ತು. ಗಾಂಧಿಯನ್ನು ಹತ್ಯೆ ಮಾಡಿದ್ದಕ್ಕೆ ನಾಥುರಾಮ್ ಗೋಡ್ಸೆಯನ್ನು ಶ್ಲಾಘಿಸಲಾಗಿತ್ತು. ಘಟನೆಗೆ ಸಂಬಂಧಿಸಿ ಕಾಳಿಚರಣ್ ಮತ್ತು ಇತರ ಧಾರ್ಮಿಕ ಮುಖಂಡರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.</p>.<p><a href="https://www.prajavani.net/india-news/bajrang-dal-says-no-to-new-year-celebrations-897792.html" itemprop="url">ಅನೈತಿಕ, ಅಧರ್ಮ; ಹೊಸ ವರ್ಷಾಚರಣೆಗೆ ಬಜರಂಗದಳ ವಿರೋಧ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯ್ಪುರ:</strong> ಹಿಂದೂ ಧಾರ್ಮಿಕ ಮುಖಂಡ ಕಾಳಿಚರಣ್ ಮಹಾರಾಜ್ ಅವರನ್ನು ಛತ್ತೀಸ್ಗಡದ ರಾಯ್ಪುರ ಜಿಲ್ಲೆಯ ಕೋರ್ಟ್ ಜನವರಿ 13ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.</p>.<p>ಕಾಳಿಚರಣ್ ಬಂಧನಕ್ಕೆ ಸಂಬಂಧಿಸಿ ಮಧ್ಯಪ್ರದೇಶದ ಬಿಜೆಪಿ ಸರ್ಕಾರ ಮತ್ತು ಛತ್ತೀಸ್ಗಡದ ಕಾಂಗ್ರೆಸ್ ಸರ್ಕಾರದ ನಡುವೆ ವಾಗ್ವಾದ ಏರ್ಪಟ್ಟಿದೆ. 'ಛತ್ತೀಸ್ಗಡ ಪೊಲೀಸರು ಕಾಳಿಚರಣ್ ವಿರುದ್ಧದ ಕ್ರಮದ ಬಗ್ಗೆ ಸುಳಿವು ನೀಡಿಲ್ಲ' ಎಂದು ಮಧ್ಯಪ್ರದೇಶ ಸರ್ಕಾರ ಆರೋಪಿಸಿದೆ.</p>.<p>ಮಹಾತ್ಮ ಗಾಂಧಿ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮತ್ತು ನಾಥುರಾಮ್ ಗೋಡ್ಸೆಯನ್ನು ಶ್ಲಾಘಿಸಿದ ಪ್ರಕರಣಕ್ಕೆ ಸಂಬಂಧಿಸಿ ಛತ್ತೀಸ್ಗಡ ಪೊಲೀಸರು ಕಾಳಿಚರಣ್ ಮಹಾರಾಜ್ ಅವರನ್ನು ಗುರುವಾರ ಬೆಳಗ್ಗೆ ಬಂಧಿಸಿದ್ದರು. ಬಳಿಕ ರಾಯ್ಪುರ ಕೋರ್ಟ್ ಕಾಳಿಚರಣ್ ಅವರನ್ನು 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು.</p>.<p><a href="https://www.prajavani.net/india-news/will-give-rs-22l-to-police-officer-if-owaisi-arrested-announce-right-wing-members-897834.html" itemprop="url">ಗುರುಗ್ರಾಮ್: ಓವೈಸಿ ಬಂಧಿಸಿದರೆ ₹22 ಲಕ್ಷ ಬಹುಮಾನ ಘೋಷಿಸಿದ ಬಲಪಂಥೀಯ ಸಂಘಟನೆಗಳು </a></p>.<p>ಪೊಲೀಸ್ ಕಸ್ಟಡಿಯಲ್ಲಿದ್ದ ಕಾಳಿಚರಣ್ ಅವರನ್ನು ಪ್ರಶ್ನಿಸಲಾಗಿದೆ. ಹೆಚ್ಚಿನ ವಿಚಾರಣೆ ನಡೆಸುವ ಅಗತ್ಯವಿಲ್ಲ ಎಂದು ಪೊಲೀಸರು ಶುಕ್ರವಾರ ಕೋರ್ಟ್ಗೆ ಹೇಳಿದ್ದಾರೆ.</p>.<p>ಮಹಾತ್ಮ ಗಾಂಧಿ ವಿರುದ್ಧ ಆಕ್ಷೇಪಾರ್ಹ ಪದ ಬಳಕೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾದ ಬೆನ್ನಲ್ಲೇ ರಾಯ್ಪುರ ಪೊಲೀಸರು ಗುರುವಾರ ಬೆಳಗ್ಗೆ ಕಾಳಿಚರಣ್ ಅವರನ್ನು ಮಧ್ಯಪ್ರದೇಶದ ಕಜುರಾಹೋ ನಗರದಿಂದ 25 ಕಿ.ಮೀ. ದೂರದ ಭಾಗೇಶ್ವರ್ ಧಾಮ್ನಲ್ಲಿ ಬಂಧಿಸಿದ್ದರು.</p>.<p>ರಾಯ್ಪುರದಲ್ಲಿ ಡಿಸೆಂಬರ್ 26ರಂದು ಭಾನುವಾರ ನಡೆದ ಧರ್ಮ ಸಂಸತ್ನಲ್ಲಿ ಮಹಾತ್ಮ ಗಾಂಧಿ ವಿರುದ್ಧ ಆಕ್ಷೇಪಾರ್ಹ ಪದ ಬಳಸಲಾಗಿತ್ತು. ಗಾಂಧಿಯನ್ನು ಹತ್ಯೆ ಮಾಡಿದ್ದಕ್ಕೆ ನಾಥುರಾಮ್ ಗೋಡ್ಸೆಯನ್ನು ಶ್ಲಾಘಿಸಲಾಗಿತ್ತು. ಘಟನೆಗೆ ಸಂಬಂಧಿಸಿ ಕಾಳಿಚರಣ್ ಮತ್ತು ಇತರ ಧಾರ್ಮಿಕ ಮುಖಂಡರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.</p>.<p><a href="https://www.prajavani.net/india-news/bajrang-dal-says-no-to-new-year-celebrations-897792.html" itemprop="url">ಅನೈತಿಕ, ಅಧರ್ಮ; ಹೊಸ ವರ್ಷಾಚರಣೆಗೆ ಬಜರಂಗದಳ ವಿರೋಧ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>