<p><strong>ಭದೋಹಿ (ಉತ್ತರ ಪ್ರದೇಶ):</strong> ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ರಾಜಸ್ಥಾನ ರಾಜ್ಯಪಾಲ ಕಲ್ರಾಜ್ ಮಿಶ್ರಾ ಸ್ವಾಗತಿಸಿದ್ದಾರೆ.</p>.<p>ಕೃಷಿ ಕಾನೂನುಗಳನ್ನು ಈಗ ರದ್ದುಗೊಳಿಸಬೇಕು ಎಂದು ಸರ್ಕಾರ ಭಾವಿಸಿದೆ. ಅಗತ್ಯವೆಂದೆನಿಸಿದಲ್ಲಿ ಮರು ಜಾರಿಗೊಳಿಸಬಹುದು ಎಂದು ಅವರು ಹೇಳಿರುವುದಾಗಿ ‘ಎಎನ್ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.</p>.<p>‘ಕೃಷಿ ಕಾಯ್ದೆಗಳ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡಲು ಸರ್ಕಾರ ಪ್ರಯತ್ನಿಸಿತ್ತು. ಕಾಯ್ದೆಗಳ ಪ್ರಯೋಜನಗಳನ್ನು ರೈತರು ಅರ್ಥಮಾಡಿಕೊಳ್ಳಬಹುದು ಎಂದು ಭಾವಿಸಿತ್ತು. ಆದರೆ, ರೈತರು ಪ್ರತಿಭಟನೆಯನ್ನು ಮುಂದುವರಿಸಿದ್ದರು ಎಂದು ಅವರು ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/for-pm-narendra-modi-nation-comes-first-says-bjp-mp-sakshi-maharaj-on-farm-bills-repealed-885667.html" itemprop="url">ಮೋದಿಗೆ ದೇಶ ಮೊದಲು, ಚುನಾವಣೆಗೆ ಕೃಷಿ ಕಾಯ್ದೆ ರದ್ದುಗೊಳಿಸಿಲ್ಲ: ಸಾಕ್ಷಿ ಮಹಾರಾಜ್ </a></p>.<p>ರೈತರ ಭಾರಿ ಪ್ರತಿಭಟನೆಯ ಕಾರಣ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಳಿಗ್ಗೆ ಘೋಷಿಸಿದ್ದರು. ಮುಂಬರುವ ಸಂಸತ್ ಅಧಿವೇಶನದಲ್ಲಿ ಕಾಯ್ದೆಗಳ ರದ್ದು ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭದೋಹಿ (ಉತ್ತರ ಪ್ರದೇಶ):</strong> ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ರಾಜಸ್ಥಾನ ರಾಜ್ಯಪಾಲ ಕಲ್ರಾಜ್ ಮಿಶ್ರಾ ಸ್ವಾಗತಿಸಿದ್ದಾರೆ.</p>.<p>ಕೃಷಿ ಕಾನೂನುಗಳನ್ನು ಈಗ ರದ್ದುಗೊಳಿಸಬೇಕು ಎಂದು ಸರ್ಕಾರ ಭಾವಿಸಿದೆ. ಅಗತ್ಯವೆಂದೆನಿಸಿದಲ್ಲಿ ಮರು ಜಾರಿಗೊಳಿಸಬಹುದು ಎಂದು ಅವರು ಹೇಳಿರುವುದಾಗಿ ‘ಎಎನ್ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.</p>.<p>‘ಕೃಷಿ ಕಾಯ್ದೆಗಳ ಬಗ್ಗೆ ರೈತರಿಗೆ ಮನವರಿಕೆ ಮಾಡಿಕೊಡಲು ಸರ್ಕಾರ ಪ್ರಯತ್ನಿಸಿತ್ತು. ಕಾಯ್ದೆಗಳ ಪ್ರಯೋಜನಗಳನ್ನು ರೈತರು ಅರ್ಥಮಾಡಿಕೊಳ್ಳಬಹುದು ಎಂದು ಭಾವಿಸಿತ್ತು. ಆದರೆ, ರೈತರು ಪ್ರತಿಭಟನೆಯನ್ನು ಮುಂದುವರಿಸಿದ್ದರು ಎಂದು ಅವರು ಹೇಳಿದ್ದಾರೆ.</p>.<p><strong>ಓದಿ:</strong><a href="https://www.prajavani.net/india-news/for-pm-narendra-modi-nation-comes-first-says-bjp-mp-sakshi-maharaj-on-farm-bills-repealed-885667.html" itemprop="url">ಮೋದಿಗೆ ದೇಶ ಮೊದಲು, ಚುನಾವಣೆಗೆ ಕೃಷಿ ಕಾಯ್ದೆ ರದ್ದುಗೊಳಿಸಿಲ್ಲ: ಸಾಕ್ಷಿ ಮಹಾರಾಜ್ </a></p>.<p>ರೈತರ ಭಾರಿ ಪ್ರತಿಭಟನೆಯ ಕಾರಣ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಳಿಗ್ಗೆ ಘೋಷಿಸಿದ್ದರು. ಮುಂಬರುವ ಸಂಸತ್ ಅಧಿವೇಶನದಲ್ಲಿ ಕಾಯ್ದೆಗಳ ರದ್ದು ಪ್ರಕ್ರಿಯೆ ಪೂರ್ಣಗೊಳಿಸುವುದಾಗಿ ತಿಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>