‘ಕಲ್ಯಾಣ್ ಸಿಂಗ್ ಅನುಸರಿಸಿದ ಮೌಲ್ಯಗಳು ಇಂದಿಗೂ ಗಟ್ಟಿಯಾಗಿವೆ. ಅವರು ರಾಮ ಮಂದಿರ ಚಳವಳಿಯಲ್ಲಿ ಗುರುತಿಸಿಕೊಂಡಿದ್ದ ಪ್ರಮುಖ ನಾಯಕರಾಗಿದ್ದು, ಅದಕ್ಕಾಗಿ ಅಧಿಕಾರವನ್ನು ತ್ಯಜಿಸಲೂ ಹಿಂಜರಿದಿರಲಿಲ್ಲ. ಅದರಿಂದಾಗಿಯೇ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಸಾಧ್ಯವಾಗುತ್ತಿದೆ. 1992ರ ಡಿಸೆಂಬರ್ 6ರ ಘಟನೆ ಬಳಿಕ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು’ ಎಂದು ಯೋಗಿ ಹೇಳಿದ್ದಾರೆ.