‘ನಾನು ಮುಖ್ಯಮಂತ್ರಿ ಆದ ಸಂದರ್ಭದಲ್ಲಿಯೇ ಮಸೀದಿ ಧ್ವಂಸ ಆಗಿದ್ದು, ವಿಧಿಲಿಖಿತವಾಗಿತ್ತು ಎನಿಸುತ್ತದೆ’ ಎಂದು ಕಳೆದ ವರ್ಷ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆ ಸಂದರ್ಭದಲ್ಲಿ ಪತ್ರಕರ್ತರಿಗೆ ಅವರು ಹೇಳಿದ್ದರು. ಮಸೀದಿ ಧ್ವಂಸ ಪ್ರಕರಣದಲ್ಲಿ ಅವರು ವಿಚಾರಣೆಯನ್ನು ಎದುರಿಸುತ್ತಿದ್ದರು. ರಾಮ ಮಂದಿರ ನಿರ್ಮಾಣವಾಗುವವರೆಗೂ ಬದುಕಿರಬೇಕು ಎಂಬುದು ಅವರ ಕೊನೆಯ ಆಸೆಯಾಗಿತ್ತು.