ಕಮಲ್ ತಿರುಗೇಟು: ಮುಖ್ಯಮಂತ್ರಿಗಳ ಹೇಳಿಕೆಗೆ ಕಮಲ್ ಹಾಸನ್ ಅವರೂ ತಿರುಗೇಟು ನೀಡಿದ್ದಾರೆ. ಮುಖ್ಯಮಂತ್ರಿಯವರೂ ರಿಯಾಲಿಟಿ ಶೋವನ್ನು ನೋಡಿದ್ದಾರೆಂದರೆ ಬಹಳ ಸಂತೋಷ ಎಂದು ಅವರು ಹೇಳಿದ್ದಾರೆ. ಕಮಲ್ ಅವರು ರಾಜಕೀಯ ಪಕ್ಷ ಸ್ಥಾಪಿಸಿರುವ ಬಗ್ಗೆ ಉಲ್ಲೇಖಿಸಿದ್ದ ಪಳನಿಸ್ವಾಮಿ ಅವರು, ‘ಅವರಿಗೆ (ಕಮಲ್ ಹಾಸನ್) ರಾಜಕೀಯದ ಬಗ್ಗೆ ಏನು ಗೊತ್ತು? ಅವರು ಬಿಗ್ ಬಾಸ್ ನಡೆಸುತ್ತಾರೆ. ಅವುಗಳನ್ನು ನೋಡಿದರೆ ಮಕ್ಕಳು ಮಾತ್ರವಲ್ಲ, ಕುಟುಂಬಗಳೇ ಹಾಳಾಗುತ್ತವೆ’ ಎಂದು ಹೇಳಿದ್ದರು.