ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆ ಸೋಲಿನ ಬೆನ್ನಲ್ಲೇ ಕಮಲ್ ಹಾಸನ್ ನೇತೃತ್ವದ ಮಕ್ಕಳ್ ನೀದಿ ಮಯ್ಯಂ (ಎಂಎನ್ಎಂ) ಪಕ್ಷವನ್ನು ತೊರೆದಿರುವಕೊಂಗು ಪ್ರಾಂತ್ಯದ ಪ್ರಭಾವಿ ನಾಯಕಆರ್. ಮಹೇಂದ್ರನ್, ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಉಪಸ್ಥಿತಿಯಲ್ಲಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಪಕ್ಷಕ್ಕೆ ಸೇರ್ಪಡೆಯಾದರು.