<p><strong>ನವದೆಹಲಿ: </strong>ಗಾಂಧಿ ಕುಟುಂಬ ಮತ್ತು ಪಕ್ಷದಲ್ಲಿ ಬದಲಾವಣೆಗೆ ಒತ್ತಾಯಿಸುತ್ತಿರುವ ಜಿ -23 ಗುಂಪಿನ ನಡುವೆ ವರ್ಷದ ಹಿಂದೆ ಸಂಧಾನಕಾರರಾಗಿ ಕೆಲಸ ಮಾಡಿದ್ದ ಕಾಂಗ್ರೆಸ್ನ ಹಿರಿಯ ಮುಖಂಡ ಕಮಲ ನಾಥ್ ಮತ್ತೊಮ್ಮೆ ಅದೇ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಹಿರಿಯ ಕಾಂಗ್ರೆಸ್ ನಾಯಕರಾದ ಕಪಿಲ್ ಸಿಬಲ್, ಗುಲಾಂ ನಬಿ ಆಜಾದ್ ಮತ್ತು ಭೂಪೇಂದರ್ ಸಿಂಗ್ ಹೂಡಾ ಅವರನ್ನು ಕಮಲ ನಾಥ್ ಭೇಟಿ ಮಾಡಿದ್ದು, ಪಕ್ಷದೊಳಗಿನ ಸಮಸ್ಯೆಗಳನ್ನು ಚರ್ಚಿಸಿದ್ದಾರೆ ಮತ್ತು ಜಿ23 ನಾಯಕರು ಎತ್ತಿರುವ ಪ್ರಶ್ನೆಗಳ ಬಗ್ಗೆ ಗಮನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮತ್ತು ಘೋಷಣೆಗಳನ್ನು ಕೂಗಿದ ನಂತರ ಸಿಬಲ್ ನಿವಾಸಕ್ಕೆ ಭೇಟಿ ನೀಡಿದ ಮೊದಲಿಗರು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲನಾಥ್ ಎಂದು ಮೂಲಗಳು ತಿಳಿಸಿವೆ.</p>.<p>ಪ್ರಮುಖ ವಿಷಯಗಳ ಬಗ್ಗೆ ಸಂಪೂರ್ಣ ಸಮಾಲೋಚನೆ ಮತ್ತು ಪಕ್ಷದೊಳಗಿನ ಚುನಾವಣೆಗಳ ಜೊತೆಗೆ ಪ್ರಮುಖ ಹುದ್ದೆಗಳ ನೇಮಕಾತಿಯ ಬಗ್ಗೆ ಜಿ–23 ಗುಂಪು ಚರ್ಚೆಗಳನ್ನು ಬಯಸುತ್ತಿದೆ ಎಂದು ತಿಳಿದು ಬಂದಿದೆ.</p>.<p>ಇತ್ತೀಚೆಗೆ, ಪಂಜಾಬ್ ಸಿಎಂ ಆಯ್ಕೆ ಕುರಿತಂತೆ ಮಾತನಾಡಿದ್ದ ಕಪಿಲ್ ಸಿಬಲ್ ಅವರು ಪಕ್ಷದಲ್ಲಿ ಪೂರ್ಣ ಪ್ರಮಾಣದ ಅಧ್ಯಕ್ಷರೇ ಇಲ್ಲದಿರುವಾಗ ನಿರ್ಧಾರಗಳನ್ನು ಯಾರು ತೆಗೆದುಕೊಳ್ಳುತ್ತಿದ್ದಾರೋ ಗೊತ್ತಾಗುತ್ತಿಲ್ಲ ಎಂದಿದ್ದರು. ಆ ಬಳಿಕ, ದೆಹಲಿಯ ಕಾಂಗ್ರೆಸ್ ಸಮಿತಿಯ ಸದಸ್ಯರು ಮತ್ತು ಕಾರ್ಯಕರ್ತರು ಸಿಬಲ್ ನಿವಾಸದ ಬಳಿ ಗದ್ದಲ ಸೃಷ್ಟಿಸಿ ಪ್ರತಿಭಟನೆ ನಡೆಸಿದ್ದರು.</p>.<p>ಮೂಲಗಳ ಪ್ರಕಾರ, ಕಮಲ ನಾಥ್ ಅವರು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆಯ ಬಗ್ಗೆ ಮಾಹಿತಿ ನೀಡಿದ್ದಾರೆ.</p>.<p>ಕಮಲ ನಾಥ್ ಅವರು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮಾಡಿದ ಆಪಾದನೆಗೆ ಉತ್ತರಿಸುವಾಗ ಪಕ್ಷದಲ್ಲಿ ಬೇರೆ ಕೆಲಸಗಳನ್ನು ಮಾಡಬೇಕಾಗಿದೆ ಎಂದು ಸುಳಿವು ನೀಡಿದ್ದಾರೆ.</p>.<p>ಇದೇವೇಳೆ, ಪ್ರಿಯಾಂಕಾ ಗಾಂಧಿ ವಾದ್ರಾ ಬಂಧನ ‘ದಮನಕಾರಿ ನೀತಿಯಾಗಿದ್ದು, ಅದನ್ನು ತೀವ್ರವಾಗಿ ಖಂಡಿಸುತ್ತೇವೆ’ಎಂದು ರಾಜ್ಯಸಭೆಯ ಕಾಂಗ್ರೆಸ್ನ ಉಪ ನಾಯಕ ಆನಂದ್ ಶರ್ಮಾ ಮತ್ತು ಕಪಿಲ್ ಸಿಬಲ್ ಸೇರಿ ಟಿ23 ನಾಯಕರು ಹೇಳಿರುವುದಾಗಿ ತಿಳಿದುಬಂದಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಗಾಂಧಿ ಕುಟುಂಬ ಮತ್ತು ಪಕ್ಷದಲ್ಲಿ ಬದಲಾವಣೆಗೆ ಒತ್ತಾಯಿಸುತ್ತಿರುವ ಜಿ -23 ಗುಂಪಿನ ನಡುವೆ ವರ್ಷದ ಹಿಂದೆ ಸಂಧಾನಕಾರರಾಗಿ ಕೆಲಸ ಮಾಡಿದ್ದ ಕಾಂಗ್ರೆಸ್ನ ಹಿರಿಯ ಮುಖಂಡ ಕಮಲ ನಾಥ್ ಮತ್ತೊಮ್ಮೆ ಅದೇ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಹಿರಿಯ ಕಾಂಗ್ರೆಸ್ ನಾಯಕರಾದ ಕಪಿಲ್ ಸಿಬಲ್, ಗುಲಾಂ ನಬಿ ಆಜಾದ್ ಮತ್ತು ಭೂಪೇಂದರ್ ಸಿಂಗ್ ಹೂಡಾ ಅವರನ್ನು ಕಮಲ ನಾಥ್ ಭೇಟಿ ಮಾಡಿದ್ದು, ಪಕ್ಷದೊಳಗಿನ ಸಮಸ್ಯೆಗಳನ್ನು ಚರ್ಚಿಸಿದ್ದಾರೆ ಮತ್ತು ಜಿ23 ನಾಯಕರು ಎತ್ತಿರುವ ಪ್ರಶ್ನೆಗಳ ಬಗ್ಗೆ ಗಮನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮತ್ತು ಘೋಷಣೆಗಳನ್ನು ಕೂಗಿದ ನಂತರ ಸಿಬಲ್ ನಿವಾಸಕ್ಕೆ ಭೇಟಿ ನೀಡಿದ ಮೊದಲಿಗರು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲನಾಥ್ ಎಂದು ಮೂಲಗಳು ತಿಳಿಸಿವೆ.</p>.<p>ಪ್ರಮುಖ ವಿಷಯಗಳ ಬಗ್ಗೆ ಸಂಪೂರ್ಣ ಸಮಾಲೋಚನೆ ಮತ್ತು ಪಕ್ಷದೊಳಗಿನ ಚುನಾವಣೆಗಳ ಜೊತೆಗೆ ಪ್ರಮುಖ ಹುದ್ದೆಗಳ ನೇಮಕಾತಿಯ ಬಗ್ಗೆ ಜಿ–23 ಗುಂಪು ಚರ್ಚೆಗಳನ್ನು ಬಯಸುತ್ತಿದೆ ಎಂದು ತಿಳಿದು ಬಂದಿದೆ.</p>.<p>ಇತ್ತೀಚೆಗೆ, ಪಂಜಾಬ್ ಸಿಎಂ ಆಯ್ಕೆ ಕುರಿತಂತೆ ಮಾತನಾಡಿದ್ದ ಕಪಿಲ್ ಸಿಬಲ್ ಅವರು ಪಕ್ಷದಲ್ಲಿ ಪೂರ್ಣ ಪ್ರಮಾಣದ ಅಧ್ಯಕ್ಷರೇ ಇಲ್ಲದಿರುವಾಗ ನಿರ್ಧಾರಗಳನ್ನು ಯಾರು ತೆಗೆದುಕೊಳ್ಳುತ್ತಿದ್ದಾರೋ ಗೊತ್ತಾಗುತ್ತಿಲ್ಲ ಎಂದಿದ್ದರು. ಆ ಬಳಿಕ, ದೆಹಲಿಯ ಕಾಂಗ್ರೆಸ್ ಸಮಿತಿಯ ಸದಸ್ಯರು ಮತ್ತು ಕಾರ್ಯಕರ್ತರು ಸಿಬಲ್ ನಿವಾಸದ ಬಳಿ ಗದ್ದಲ ಸೃಷ್ಟಿಸಿ ಪ್ರತಿಭಟನೆ ನಡೆಸಿದ್ದರು.</p>.<p>ಮೂಲಗಳ ಪ್ರಕಾರ, ಕಮಲ ನಾಥ್ ಅವರು ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಮಾತುಕತೆಯ ಬಗ್ಗೆ ಮಾಹಿತಿ ನೀಡಿದ್ದಾರೆ.</p>.<p>ಕಮಲ ನಾಥ್ ಅವರು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮಾಡಿದ ಆಪಾದನೆಗೆ ಉತ್ತರಿಸುವಾಗ ಪಕ್ಷದಲ್ಲಿ ಬೇರೆ ಕೆಲಸಗಳನ್ನು ಮಾಡಬೇಕಾಗಿದೆ ಎಂದು ಸುಳಿವು ನೀಡಿದ್ದಾರೆ.</p>.<p>ಇದೇವೇಳೆ, ಪ್ರಿಯಾಂಕಾ ಗಾಂಧಿ ವಾದ್ರಾ ಬಂಧನ ‘ದಮನಕಾರಿ ನೀತಿಯಾಗಿದ್ದು, ಅದನ್ನು ತೀವ್ರವಾಗಿ ಖಂಡಿಸುತ್ತೇವೆ’ಎಂದು ರಾಜ್ಯಸಭೆಯ ಕಾಂಗ್ರೆಸ್ನ ಉಪ ನಾಯಕ ಆನಂದ್ ಶರ್ಮಾ ಮತ್ತು ಕಪಿಲ್ ಸಿಬಲ್ ಸೇರಿ ಟಿ23 ನಾಯಕರು ಹೇಳಿರುವುದಾಗಿ ತಿಳಿದುಬಂದಿದೆ.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>