ಮಧ್ಯಪ್ರದೇಶದ ಅಗರ್ ಮಲ್ವಾ ಜಿಲ್ಲೆಯಲ್ಲಿರುವ ಸೊಯಾತ್ಕಲನ್ನಲ್ಲಿ ನಡೆಯುತ್ತಿದ್ದ ಭಾರತ್ ಜೋಡೊ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರು ಇತ್ತಿಚೆಗೆ ಅಧ್ಯಾತ್ಮದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಕಮಲ್ ನಾಥ್ ಅವರು, ಅಧ್ಯಾತ್ಮ, ಧರ್ಮದ ಕುರಿತು ಮಾಧ್ಯಮದವರ ಎದುರೇ ಬಿಜೆಪಿ, ಆರ್ಎಸ್ಎಸ್ ಮತ್ತು ವಿಎಚ್ಪಿ ನಾಯಕರೊಂದಿಗೆ ಚರ್ಚೆ ನಡೆಯಲಿ. ಈ ಚರ್ಚೆಯಲ್ಲಿ ರಾಹುಲ್ ಗಾಂಧಿ ಅವರಿಗೇ ಹೆಚ್ಚಿನ ಜ್ಞಾನ ಇದೆ ಎಂದು ಸಾಬೀತಾಗುತ್ತದೆ ಎಂದು ಹೇಳಿದ್ದಾರೆ.