ಇಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿಂಧಿಯಾ, ‘ಯಾರಾದರೂ ಜನರಿಗೆ ಮೋಸ ಮಾಡಿದವರು ಇದ್ದರೆ, ಅದು ಕಮಲನಾಥ್ ಮತ್ತು ದಿಗ್ವಿಜಯ್ ಸಿಂಗ್ ಮಾತ್ರ. ಅವರು ಅಧಿಕಾರದಲ್ಲಿದ್ದ15 ತಿಂಗಳಲ್ಲಿಯೂ ರೈತರ ಸಾಲ ಮನ್ನಾ ಮಾಡಲಿಲ್ಲ. ₹ 8 ಸಾವಿರ ಕೋಟಿ ಮೊತ್ತದ ಸಾಲದ ಹೊರೆಯನ್ನು ಶಿವರಾಜ್ ಸಿಂಗ್ ಸರ್ಕಾರದ ಮೇಲೆ ಹೇರಿದ್ದಾರೆ’ ಎಂದು ಹೇಳಿದ್ದಾರೆ.