<p><strong>ಬೆತುಲ್ (ಮ.ಪ್ರದೇಶ):</strong> ಮಧ್ಯ ಪ್ರದೇಶದ ಬೆತುಲ್ ಜಿಲ್ಲೆಯಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ ಸಿನಿಮಾ ಚಿತ್ರೀಕರಣ ನಡೆಸುತ್ತಿದ್ದ ಸ್ಥಳಕ್ಕೆ ಪ್ರತಿಭಟನೆ ನಡೆಸಿರುವ ಕಾಂಗ್ರೆಸ್ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಜಲ ಫಿರಂಗಿಗಳನ್ನು ಪ್ರಯೋಗಿಸಿದ್ದಾರೆ ಎಂದುಅಧಿಕಾರಿಗಳುತಿಳಿಸಿದ್ದಾರೆ.</p>.<p>ಇತ್ತೀಚೆಗೆ ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಸೇರಿದಂತೆ ಅನೇಕ ವಿಷಯಗಳ ಕುರಿತಾಗಿ ಟ್ವೀಟ್ ಮಾಡಿರುವ ನಟಿ ಕಂಗನಾ ರಣಾವತ್ ವಿವಾದಕ್ಕೊಳಗಾಗಿದ್ದರು.</p>.<p>ಕಂಗನಾ ರಣಾವತ್ ಕ್ಷಮೆ ಯಾಚನೆ ನಡೆಸಬೇಕೆಂಬ ಬೇಡಿಕೆಯೊಂದಿಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ವಿದ್ಯುತ್ ಕೇಂದ್ರದ ಕಲ್ಲಿದ್ದಲು ನಿರ್ವಹಣಾ ಘಟಕದಲ್ಲಿ ಕಂಗನಾ ಸಿನಿಮಾ ಶೂಟಿಂಗ್ನಲ್ಲಿ ನಿರತವಾಗಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/entertainment/other-entertainment/kangana-ranaut-lashes-out-at-taapsee-pannu-india-farmers-protest-delhi-twitter-bollywood-rihanna-802327.html" itemprop="url">ಬಾಲಿವುಡ್ನ ಖ್ಯಾತ ನಟಿಯರ ಜಗಳಕ್ಕೆ ಕಾರಣವಾದ ಪಾಪ್ ಗಾಯಕಿ ರಿಹಾನ್ನಾ ಟ್ವೀಟ್ </a></p>.<p>ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆಯಿಂದಾಗಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.</p>.<p>ಮಧ್ಯ ಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಸೂಚನೆಯಂತೆ ಕಂಗನಾ ಚಿತ್ರೀಕರಣದ ಪ್ರದೇಶದಲ್ಲಿ ಭದ್ರತೆಗಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಜನವರಿ 17ರ ವರೆಗೆ ಚಿತ್ರೀಕರಣ ಮುಂದುವರಿಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆತುಲ್ (ಮ.ಪ್ರದೇಶ):</strong> ಮಧ್ಯ ಪ್ರದೇಶದ ಬೆತುಲ್ ಜಿಲ್ಲೆಯಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ ಸಿನಿಮಾ ಚಿತ್ರೀಕರಣ ನಡೆಸುತ್ತಿದ್ದ ಸ್ಥಳಕ್ಕೆ ಪ್ರತಿಭಟನೆ ನಡೆಸಿರುವ ಕಾಂಗ್ರೆಸ್ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಜಲ ಫಿರಂಗಿಗಳನ್ನು ಪ್ರಯೋಗಿಸಿದ್ದಾರೆ ಎಂದುಅಧಿಕಾರಿಗಳುತಿಳಿಸಿದ್ದಾರೆ.</p>.<p>ಇತ್ತೀಚೆಗೆ ಕೇಂದ್ರ ಸರ್ಕಾರದ ಮೂರು ನೂತನ ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಸೇರಿದಂತೆ ಅನೇಕ ವಿಷಯಗಳ ಕುರಿತಾಗಿ ಟ್ವೀಟ್ ಮಾಡಿರುವ ನಟಿ ಕಂಗನಾ ರಣಾವತ್ ವಿವಾದಕ್ಕೊಳಗಾಗಿದ್ದರು.</p>.<p>ಕಂಗನಾ ರಣಾವತ್ ಕ್ಷಮೆ ಯಾಚನೆ ನಡೆಸಬೇಕೆಂಬ ಬೇಡಿಕೆಯೊಂದಿಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ವಿದ್ಯುತ್ ಕೇಂದ್ರದ ಕಲ್ಲಿದ್ದಲು ನಿರ್ವಹಣಾ ಘಟಕದಲ್ಲಿ ಕಂಗನಾ ಸಿನಿಮಾ ಶೂಟಿಂಗ್ನಲ್ಲಿ ನಿರತವಾಗಿದ್ದರು.</p>.<p>ಇದನ್ನೂ ಓದಿ:<a href="https://www.prajavani.net/entertainment/other-entertainment/kangana-ranaut-lashes-out-at-taapsee-pannu-india-farmers-protest-delhi-twitter-bollywood-rihanna-802327.html" itemprop="url">ಬಾಲಿವುಡ್ನ ಖ್ಯಾತ ನಟಿಯರ ಜಗಳಕ್ಕೆ ಕಾರಣವಾದ ಪಾಪ್ ಗಾಯಕಿ ರಿಹಾನ್ನಾ ಟ್ವೀಟ್ </a></p>.<p>ಕಾಂಗ್ರೆಸ್ ಪ್ರತಿಭಟನಾ ಮೆರವಣಿಗೆಯಿಂದಾಗಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು.</p>.<p>ಮಧ್ಯ ಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಸೂಚನೆಯಂತೆ ಕಂಗನಾ ಚಿತ್ರೀಕರಣದ ಪ್ರದೇಶದಲ್ಲಿ ಭದ್ರತೆಗಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಜನವರಿ 17ರ ವರೆಗೆ ಚಿತ್ರೀಕರಣ ಮುಂದುವರಿಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>