ಮುಂಬೈ: ಮಹಾರಾಷ್ಟ್ರ ಸರ್ಕಾರ ಮತ್ತು ನಟಿ ಕಂಗನಾ ರನೌತ್ ನಡುವಿನ ಜಟಾಪಟಿ ಮುಂದುವರಿದಿದ್ದು, ಕಂಗನಾ ಅವರು ಭಾನುವಾರ ಮಹಾರಾಷ್ಟ್ರದ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ರಾಜಭವನದಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಂಗನಾ,‘ನಮ್ಮ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ. ಸಾಮಾನ್ಯ ಪ್ರಜೆಯಾಗಿ ಅವರನ್ನು ಭೇಟಿಯಾದೆ. ಅವರು ನನ್ನನ್ನು ಮಗಳಂತೆ ಕಂಡರು’ ಎಂದು ತಿಳಿಸಿದ್ದಾರೆ.
‘ನನಗಾದ ಅನ್ಯಾಯದ ಕುರಿತು ರಾಜ್ಯಪಾಲರಿಗೆ ತಿಳಿಸಿದ್ದೇನೆ. ಸರ್ಕಾರ ನನ್ನ ವಿರುದ್ಧ ಅನುಚಿತ ಮತ್ತು ಅಸಭ್ಯ ವರ್ತನೆ ತೋರಿದೆ’ ಎಂದು ಹೇಳಿದ್ದಾರೆ.