<p><strong>ಮುಂಬೈ: </strong>ಬಾಲಿವುಡ್ ನಟಿ ಕಂಗನಾ ರನೌತ್ ಬಂಗಲೆಯ ಕೆಲಭಾಗವನ್ನು ಕೆಡವಿರುವ ಬೃಹನ್ ಮುಂಬೈ ಮಹಾನಗರಪಾಲಿಕೆಯ (ಬಿಎಂಸಿ) ಕ್ರಮ ದುರುದ್ದೇಶದಿಂದ ಕೂಡಿದೆ. ಇದರಿಂದ ಕಂಗನಾ ಅವರಿಗೆ ಗಣನೀಯ ಪ್ರಮಾಣದಲ್ಲಿ ನಷ್ಟವಾಗಿದೆ ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>ನ್ಯಾಯಾಲಯವು ಬಿಎಂಸಿ ಆದೇಶವನ್ನು ಶುಕ್ರವಾರ ಅನೂರ್ಜಿತಗೊಳಿಸಿದೆ. ಯಾವುದೇ ಪ್ರಜೆಯ ವಿರುದ್ಧ ‘ತೋಳ್ಭಲ’ ಪ್ರದರ್ಶಿಸುವುದನ್ನು ಸಮ್ಮತಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.</p>.<p>ಸೆಪ್ಟೆಂಬರ್ 9ರಂದು ಬಾಂದ್ರಾದಲ್ಲಿರುವ ಕಂಗನಾ ರನೌತ್ ಅವರ ಬಂಗಲೆಯ ಒಂದು ಭಾಗವನ್ನು ಬಿಎಂಸಿ ನೆಲಸಮಗೊಳಿಸಿತ್ತು. ಇದನ್ನು ಪ್ರಶ್ನಿಸಿ ನಟಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು.</p>.<p>ನ್ಯಾಯಮೂರ್ತಿಗಳಾದ ಎಸ್.ಜೆ.ಕಥಾವಾಲಾ ಮತ್ತು ಆರ್.ಐ.ಚಾಗ್ಲಾ ಅವರಿದ್ದ ಪೀಠ ಈ ಆದೇಶ ನೀಡಿದೆ.</p>.<p>ಬಾಂದ್ರಾದ ಪಾಲಿಹಿಲ್ನಲ್ಲಿರುವ ತಮ್ಮ ಬಂಗ್ಲೆಯನ್ನು ಸೆಪ್ಟೆಂಬರ್ 9ರಂದು ನೆಲಸಮಗೊಳಿಸುವ ಬಿಎಂಸಿ ಕಾರ್ಯಾಚರಣೆ ವಿರುದ್ಧ ಕಂಗನಾ, ನ್ಯಾಯಾಲಯದ ಮೊರೆಹೋಗಿದ್ದರು. ಬಿಎಂಸಿ ತಮಗೆ ₹2 ಕೋಟಿ ನಷ್ಟಪರಿಹಾರ ಕೊಡಬೇಕು ಮತ್ತು ಬಿಎಂಸಿ ಕ್ರಮ ಕಾನೂನುಬಾಹಿರ ಎಂದು ಘೋಷಿಸಬೇಕು ಎಂದು ಅರ್ಜಿಯಲ್ಲಿ ಒತ್ತಾಯಿಸಿದ್ದರು.</p>.<p>ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ಹೈಕೋರ್ಟ್ ಅಂದೇ ಆದೇಶಿಸಿತ್ತು.</p>.<p>ಕಾರ್ಯಾಚರಣೆಯಿಂದ ಬಂಗಲೆಗೆ ಆದ ಹಾನಿಯ ಬಗ್ಗೆ ನಟಿ ಮತ್ತು ಪಾಲಿಕೆ ಜೊತೆ ಪರಿಶೀಲಿಸಿ ಪರಿಹಾರದ ಮೊತ್ತವನ್ನು ಅಂದಾಜು ಮಾಡಲು ಮೌಲ್ಯಮಾಪಕರನ್ನು ನೇಮಿಸುವುದಾಗಿ ನ್ಯಾಯಾಲಯ ತಿಳಿಸಿತು.</p>.<p>2021ರ ಮಾರ್ಚ್ ತಿಂಗಳೊಳಗೆ ಪರಿಹಾರದ ಬಗ್ಗೆ ಸೂಕ್ತ ಆದೇಶ ಪ್ರಕಟಿಸಲಾಗುವುದು ಎಂದು ನ್ಯಾಯಾಲಯಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಬಾಲಿವುಡ್ ನಟಿ ಕಂಗನಾ ರನೌತ್ ಬಂಗಲೆಯ ಕೆಲಭಾಗವನ್ನು ಕೆಡವಿರುವ ಬೃಹನ್ ಮುಂಬೈ ಮಹಾನಗರಪಾಲಿಕೆಯ (ಬಿಎಂಸಿ) ಕ್ರಮ ದುರುದ್ದೇಶದಿಂದ ಕೂಡಿದೆ. ಇದರಿಂದ ಕಂಗನಾ ಅವರಿಗೆ ಗಣನೀಯ ಪ್ರಮಾಣದಲ್ಲಿ ನಷ್ಟವಾಗಿದೆ ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.</p>.<p>ನ್ಯಾಯಾಲಯವು ಬಿಎಂಸಿ ಆದೇಶವನ್ನು ಶುಕ್ರವಾರ ಅನೂರ್ಜಿತಗೊಳಿಸಿದೆ. ಯಾವುದೇ ಪ್ರಜೆಯ ವಿರುದ್ಧ ‘ತೋಳ್ಭಲ’ ಪ್ರದರ್ಶಿಸುವುದನ್ನು ಸಮ್ಮತಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.</p>.<p>ಸೆಪ್ಟೆಂಬರ್ 9ರಂದು ಬಾಂದ್ರಾದಲ್ಲಿರುವ ಕಂಗನಾ ರನೌತ್ ಅವರ ಬಂಗಲೆಯ ಒಂದು ಭಾಗವನ್ನು ಬಿಎಂಸಿ ನೆಲಸಮಗೊಳಿಸಿತ್ತು. ಇದನ್ನು ಪ್ರಶ್ನಿಸಿ ನಟಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು.</p>.<p>ನ್ಯಾಯಮೂರ್ತಿಗಳಾದ ಎಸ್.ಜೆ.ಕಥಾವಾಲಾ ಮತ್ತು ಆರ್.ಐ.ಚಾಗ್ಲಾ ಅವರಿದ್ದ ಪೀಠ ಈ ಆದೇಶ ನೀಡಿದೆ.</p>.<p>ಬಾಂದ್ರಾದ ಪಾಲಿಹಿಲ್ನಲ್ಲಿರುವ ತಮ್ಮ ಬಂಗ್ಲೆಯನ್ನು ಸೆಪ್ಟೆಂಬರ್ 9ರಂದು ನೆಲಸಮಗೊಳಿಸುವ ಬಿಎಂಸಿ ಕಾರ್ಯಾಚರಣೆ ವಿರುದ್ಧ ಕಂಗನಾ, ನ್ಯಾಯಾಲಯದ ಮೊರೆಹೋಗಿದ್ದರು. ಬಿಎಂಸಿ ತಮಗೆ ₹2 ಕೋಟಿ ನಷ್ಟಪರಿಹಾರ ಕೊಡಬೇಕು ಮತ್ತು ಬಿಎಂಸಿ ಕ್ರಮ ಕಾನೂನುಬಾಹಿರ ಎಂದು ಘೋಷಿಸಬೇಕು ಎಂದು ಅರ್ಜಿಯಲ್ಲಿ ಒತ್ತಾಯಿಸಿದ್ದರು.</p>.<p>ಕಾರ್ಯಾಚರಣೆ ಸ್ಥಗಿತಗೊಳಿಸುವಂತೆ ಹೈಕೋರ್ಟ್ ಅಂದೇ ಆದೇಶಿಸಿತ್ತು.</p>.<p>ಕಾರ್ಯಾಚರಣೆಯಿಂದ ಬಂಗಲೆಗೆ ಆದ ಹಾನಿಯ ಬಗ್ಗೆ ನಟಿ ಮತ್ತು ಪಾಲಿಕೆ ಜೊತೆ ಪರಿಶೀಲಿಸಿ ಪರಿಹಾರದ ಮೊತ್ತವನ್ನು ಅಂದಾಜು ಮಾಡಲು ಮೌಲ್ಯಮಾಪಕರನ್ನು ನೇಮಿಸುವುದಾಗಿ ನ್ಯಾಯಾಲಯ ತಿಳಿಸಿತು.</p>.<p>2021ರ ಮಾರ್ಚ್ ತಿಂಗಳೊಳಗೆ ಪರಿಹಾರದ ಬಗ್ಗೆ ಸೂಕ್ತ ಆದೇಶ ಪ್ರಕಟಿಸಲಾಗುವುದು ಎಂದು ನ್ಯಾಯಾಲಯಹೇಳಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>