ರನೌತ್ ಹಾಗೂ ರಂಗೋಲಿ ಅವರ ವಿರುದ್ಧ ಮುನ್ನಾವಾರ್ಲಿ ಸಯೈದ್ ಎಂಬುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಬಾಂದ್ರಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು, ತನಿಖೆ ನಡೆಸಲು ಪೊಲೀಸರಿಗೆ ಆದೇಶಿಸಿತ್ತು. ಇದರ ಬೆನ್ನಲ್ಲೇ ದೇಶದ್ರೋಹ ಪ್ರಕರಣದಡಿ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ‘ಎಫ್ಐಆರ್ ಹಾಗೂ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಲು ಮತ್ತು ವಿಚಾರಣೆಗೆ ಹಾಜರಾಗಲು ಪೊಲೀಸರು ನೀಡಿರುವ ಸಮನ್ಸ್ಗೆ ತಡೆ ಕೋರಿ ಕಂಗನಾ ಹಾಗೂ ರಂಗೋಲಿ ಅವರು ಅರ್ಜಿ ಸಲ್ಲಿಸಿದ್ದಾರೆ’ ಎಂದು ಅವರ ಪರ ವಕೀಲ ರಿಜ್ವಾನ್ ಸಿದ್ದಿಖಿ ತಿಳಿಸಿದರು.