ನ್ಯಾಯಮೂರ್ತಿ ಎಸ್.ಬಿ. ಸಿನ್ಹಾ ಸ್ಮರಣಾರ್ಥ ರಾಂಚಿಯ ನ್ಯಾಷನಲ್ ಯೂನಿವರ್ಸಿಟಿ ಆಫ್ ಸ್ಟಡಿ ಆ್ಯಂಡ್ ರಿಸರ್ಚ್ ಇನ್ ಲಾ ಆಯೋಜಿಸಿದ್ದ 'ನ್ಯಾಯಾಧೀಶರ ಜೀವನ' ಕುರಿತು ಉಪನ್ಯಾಸ ಉದ್ಘಾಟಿಸಿ ಮಾತನಾಡಿದ ಸಿಜೆಐ ರಮಣ, ಅನಧಿಕೃತ ಮಾಧ್ಯಮ ವಿಚಾರಣೆಯು ನ್ಯಾಯಾಂಗದ ನ್ಯಾಯಯುತ ಕಾರ್ಯನಿರ್ವಹಣೆ ಹಾಗೂ ನ್ಯಾಯಾಲಯಗಳ ಸ್ವಾತಂತ್ರ್ಯಕ್ಕೆ ಅಡ್ಡಿಯಾಗುತ್ತಿದೆ ಎಂದು ಹೇಳಿದ್ದಾರೆ.