'ಇಂಡಿಯನ್ ಎಕ್ಸ್ಪ್ರೆಸ್' ಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಅವರು, 'ಪಕ್ಷವು ಎದುರಿಸುತ್ತಿರುವ ಸಮಸ್ಯೆಗಳನ್ನು ಕಾಂಗ್ರೆಸ್ ನಾಯಕತ್ವ ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕಾಂಗ್ರೆಸ್ ಪಕ್ಷವು ಜನರ ಆಯ್ಕೆ ಅಲ್ಲ ಎಂಬುದನ್ನು ಚುನಾವಣಾ ಫಲಿತಾಂಶಗಳು ತೋರಿಸುತ್ತಿವೆ. ಕಾಂಗ್ರೆಸ್ ಪಕ್ಷವನ್ನು ಪರ್ಯಾಯ ರಾಜಕೀಯ ಶಕ್ತಿಯೆಂದು ಮತದಾರರು ಸ್ವೀಕರಿಸುತ್ತಿಲ್ಲ. ಇದಕ್ಕೆ ಬಿಹಾರ ಮತ್ತು ಹಲವು ರಾಜ್ಯಗಳಲ್ಲಿ ನಡೆದ ಚುನಾವಣೆಗಳೇ ಸಾಕ್ಷಿ' ಎಂದು ಕಪಿಲ್ ಸಿಬಲ್ ಕಿಡಿಕಾರಿದ್ದಾರೆ.