ಸಿಬಲ್ ನೀಡಿರುವ ಹೇಳಿಕೆಯನ್ನು ಅಖಿಲ ಭಾರತ ವಕೀಲರ ಸಂಘ (ಎಐಬಿಎ) ‘ಅವಹೇಳನಕಾರಿ’ ಎಂದು ಕರೆದಿದೆ. ದೃಢವಾದ ವ್ಯವಸ್ಥೆಯು ಕಾನೂನಿನಿಂದ ಮಾತ್ರವೇ ಪ್ರೇರಿತವಾಗಿದ್ದು, ಭಾವನೆಗಳಿಂದಲ್ಲ. ಕಪಿಲ್ ಸಿಬಲ್ ಅವರೊಬ್ಬ ಹಿರಿಯ ನ್ಯಾಯವಾದಿ. ನ್ಯಾಯಾಲಯವು ತಮ್ಮ ಅಥವಾ ಸಹೋದ್ಯೋಗಿಗಳ ಸಲ್ಲಿಕೆಗಳನ್ನು ಒಪ್ಪಿಲ್ಲ ಎಂಬ ಕಾರಣಕ್ಕಾಗಿ ನ್ಯಾಯಾಲಯ ಮತ್ತು ನ್ಯಾಯಾಧೀಶರ ತೀರ್ಪುಗಳನ್ನು ನಿರಾಕರಿಸುವುದು ಅವರಿಗೆ ಭೂಷಣವಲ್ಲ ಎಂದು ವಕೀಲರ ಸಂಘದ ಅಧ್ಯಕ್ಷ ಡಾ. ಆದೀಶ್ ಸಿ ಅಗರ್ವಾಲ್ ಪ್ರತಿಕ್ರಿಯಿಸಿದ್ದಾರೆ.