<p><strong>ಪಣಜಿ: </strong>’ಕರ್ನಾಟಕದಲ್ಲಿ ಗೋಹತ್ಯೆಗೆ ನಿಷೇಧ ಹೇರಿ ಕಠಿಣ ಕಾನೂನು ರೂಪಿಸಿರುವುದರಿಂದ ಗೋವಾದಲ್ಲಿ ದನದ ಮಾಂಸಕ್ಕೆ ಕೊರತೆಯಾಗಿದೆ’ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.</p>.<p>‘ಸದ್ಯಕ್ಕೆ ಮಾಂಸಕ್ಕೆ ಸಂಬಂಧಿಸಿದಂತೆ ಬಿಕ್ಕಟ್ಟು ಸೃಷ್ಟಿಯಾಗಿದೆ. ಗೋವಾ ರಾಜ್ಯಕ್ಕೆ ಅತಿ ಹೆಚ್ಚಿನ ಪ್ರಮಾಣದಲ್ಲಿ ಕರ್ನಾಟಕದಿಂದಲೇ ದನದ ಮಾಂಸ ಪೂರೈಕೆಯಾಗುತ್ತಿತ್ತು. ಆದರೆ, ಕರ್ನಾಟಕ ದಿಢೀರನೆ ಕಾನೂನು ರೂಪಿಸಿ ಗೋಹತ್ಯೆಗೆ ನಿಷೇಧ ಹೇರಿದ್ದರಿಂದ ಸಮಸ್ಯೆಯಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ಗೋಮಾತೆಯನ್ನು ನಾನು ಪೂಜಿಸುತ್ತೇನೆ. ಆದರೆ, ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಯೂ ಸಹ ನನ್ನ ಜವಾಬ್ದಾರಿಯಾಗಿದೆ. ಅಲ್ಪಸಂಖ್ಯಾತರಿಗೆ ದನದ ಮಾಂಸ ನಿತ್ಯದ ಆಹಾರವಾಗಿದೆ. ಆಹಾರ ಕೊರತೆಯಾಗದಂತೆ ಕ್ರಮಕೈಗೊಳ್ಳಲಾಗುವುದು’ ಎಂದು ಅವರು ಹೇಳಿದ್ದಾರೆ.</p>.<p>‘ಮಾಂಸಕ್ಕಾಗಿ ಇತರ ರಾಜ್ಯಗಳಿಂದ ಜಾನುವಾರುಗಳನ್ನು ತರುವ ಪ್ರಯತ್ನ ಮಾಡಲಾಗುವುದು. ಈ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಪಶು ಸಂಗೋಪನಾ ಇಲಾಖೆಗೂ ನಿರ್ದೇಶನ ನೀಡಿದ್ದೇನೆ. ಗೋವಾದಲ್ಲಿರುವ ಶೇಕಡ 30ರಷ್ಟು ಅಲ್ಪಸಂಖ್ಯಾತರಿಗೆ ದನದ ಮಾಂಸ ಸಕಾಲಕ್ಕೆ ಲಭ್ಯವಾಗುವಂತೆ ಕ್ರಮಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.</p>.<p>ಗೋವಾದಲ್ಲಿ ಪ್ರತಿದಿನ 25 ಟನ್ಗಳಿಗೂ ಹೆಚ್ಚು ದನದ ಮಾಂಸವನ್ನು ಸೇವಿಸಲಾಗುತ್ತದೆ. ಇದರಲ್ಲಿ ಬೆಳಗಾವಿ ಜಿಲ್ಲೆಯಿಂದಲೇ ಅತಿ ಹೆಚ್ಚು ದನದ ಮಾಂಸ ಪೂರೈಕೆಯಾಗುತ್ತದೆ. ರೆಸ್ಟೊರೆಂಟ್ಗಳಲ್ಲಿಯೂ ದನದ ಮಾಂಸವನ್ನು ನೀಡಲಾಗುತ್ತದೆ.</p>.<p>ಕ್ರಿಸ್ಮಸ್ ಮತ್ತು ಇತರ ಹಬ್ಬಗಳ ಮುನ್ನವೇ ದನದ ಮಾಂಸದ ಕೊರತೆಯಾಗಿರುವುದು ಕ್ರೈಸ್ತ ಸಮುದಾಯದ ಅಸಮಾಧಾನಕ್ಕೆ ಕೊರತೆಯಾಗಿದೆ. ಗೋವಾದ ಒಟ್ಟು ಜನಸಂಖ್ಯೆಯಲ್ಲಿ ಶೇಕಡ 26ರಷ್ಟು ಕ್ರೈಸ್ತ ಸಮುದಾಯವರಿದ್ದಾರೆ. ಮುಸ್ಲಿಮರು ಸೇರಿದಂತೆ ಶೇಕಡ 30ಕ್ಕೂ ಹೆಚ್ಚು ಜನ ಮಂದಿ ಅಲ್ಪಸಂಖ್ಯಾತರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಣಜಿ: </strong>’ಕರ್ನಾಟಕದಲ್ಲಿ ಗೋಹತ್ಯೆಗೆ ನಿಷೇಧ ಹೇರಿ ಕಠಿಣ ಕಾನೂನು ರೂಪಿಸಿರುವುದರಿಂದ ಗೋವಾದಲ್ಲಿ ದನದ ಮಾಂಸಕ್ಕೆ ಕೊರತೆಯಾಗಿದೆ’ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದಾರೆ.</p>.<p>‘ಸದ್ಯಕ್ಕೆ ಮಾಂಸಕ್ಕೆ ಸಂಬಂಧಿಸಿದಂತೆ ಬಿಕ್ಕಟ್ಟು ಸೃಷ್ಟಿಯಾಗಿದೆ. ಗೋವಾ ರಾಜ್ಯಕ್ಕೆ ಅತಿ ಹೆಚ್ಚಿನ ಪ್ರಮಾಣದಲ್ಲಿ ಕರ್ನಾಟಕದಿಂದಲೇ ದನದ ಮಾಂಸ ಪೂರೈಕೆಯಾಗುತ್ತಿತ್ತು. ಆದರೆ, ಕರ್ನಾಟಕ ದಿಢೀರನೆ ಕಾನೂನು ರೂಪಿಸಿ ಗೋಹತ್ಯೆಗೆ ನಿಷೇಧ ಹೇರಿದ್ದರಿಂದ ಸಮಸ್ಯೆಯಾಗಿದೆ’ ಎಂದು ತಿಳಿಸಿದ್ದಾರೆ.</p>.<p>‘ಗೋಮಾತೆಯನ್ನು ನಾನು ಪೂಜಿಸುತ್ತೇನೆ. ಆದರೆ, ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಯೂ ಸಹ ನನ್ನ ಜವಾಬ್ದಾರಿಯಾಗಿದೆ. ಅಲ್ಪಸಂಖ್ಯಾತರಿಗೆ ದನದ ಮಾಂಸ ನಿತ್ಯದ ಆಹಾರವಾಗಿದೆ. ಆಹಾರ ಕೊರತೆಯಾಗದಂತೆ ಕ್ರಮಕೈಗೊಳ್ಳಲಾಗುವುದು’ ಎಂದು ಅವರು ಹೇಳಿದ್ದಾರೆ.</p>.<p>‘ಮಾಂಸಕ್ಕಾಗಿ ಇತರ ರಾಜ್ಯಗಳಿಂದ ಜಾನುವಾರುಗಳನ್ನು ತರುವ ಪ್ರಯತ್ನ ಮಾಡಲಾಗುವುದು. ಈ ಬಗ್ಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಪಶು ಸಂಗೋಪನಾ ಇಲಾಖೆಗೂ ನಿರ್ದೇಶನ ನೀಡಿದ್ದೇನೆ. ಗೋವಾದಲ್ಲಿರುವ ಶೇಕಡ 30ರಷ್ಟು ಅಲ್ಪಸಂಖ್ಯಾತರಿಗೆ ದನದ ಮಾಂಸ ಸಕಾಲಕ್ಕೆ ಲಭ್ಯವಾಗುವಂತೆ ಕ್ರಮಕೈಗೊಳ್ಳಲಾಗುವುದು’ ಎಂದು ತಿಳಿಸಿದ್ದಾರೆ.</p>.<p>ಗೋವಾದಲ್ಲಿ ಪ್ರತಿದಿನ 25 ಟನ್ಗಳಿಗೂ ಹೆಚ್ಚು ದನದ ಮಾಂಸವನ್ನು ಸೇವಿಸಲಾಗುತ್ತದೆ. ಇದರಲ್ಲಿ ಬೆಳಗಾವಿ ಜಿಲ್ಲೆಯಿಂದಲೇ ಅತಿ ಹೆಚ್ಚು ದನದ ಮಾಂಸ ಪೂರೈಕೆಯಾಗುತ್ತದೆ. ರೆಸ್ಟೊರೆಂಟ್ಗಳಲ್ಲಿಯೂ ದನದ ಮಾಂಸವನ್ನು ನೀಡಲಾಗುತ್ತದೆ.</p>.<p>ಕ್ರಿಸ್ಮಸ್ ಮತ್ತು ಇತರ ಹಬ್ಬಗಳ ಮುನ್ನವೇ ದನದ ಮಾಂಸದ ಕೊರತೆಯಾಗಿರುವುದು ಕ್ರೈಸ್ತ ಸಮುದಾಯದ ಅಸಮಾಧಾನಕ್ಕೆ ಕೊರತೆಯಾಗಿದೆ. ಗೋವಾದ ಒಟ್ಟು ಜನಸಂಖ್ಯೆಯಲ್ಲಿ ಶೇಕಡ 26ರಷ್ಟು ಕ್ರೈಸ್ತ ಸಮುದಾಯವರಿದ್ದಾರೆ. ಮುಸ್ಲಿಮರು ಸೇರಿದಂತೆ ಶೇಕಡ 30ಕ್ಕೂ ಹೆಚ್ಚು ಜನ ಮಂದಿ ಅಲ್ಪಸಂಖ್ಯಾತರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>