ಮಂಗಳವಾರ, ತೆಲಂಗಾಣ ಅಭಿಯಾನದ ಹುತಾತ್ಮರಿಗೆ ನಮನ ಸಲ್ಲಿಸಲು, ಬ್ಯಾರಿಕೇಡ್ಗಳನ್ನು ತೆಗೆದು ತೇಜಸ್ವಿ ಸೂರ್ಯ ಕ್ಯಾಂಪಸ್ ಒಳಗೆ ಪ್ರವೇಶಿಸಿದ್ದರು. ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಅವರು ನೀಡಿದ ದೂರಿನ ಅನ್ವಯ, ಭಾರತೀಯ ದಂಡ ಸಂಹಿತೆ ಸೆಕ್ಷನ್ 447ರಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದರು.