‘ಅಖಂಡವಾಗಿದ್ದ ಭಾರತವನ್ನು ತುಂಡು ಮಾಡಿದ್ದು ಕಾಂಗ್ರೆಸ್. ಅದೇ ಕಾಂಗ್ರೆಸ್ ಈಗ ಭಾರತ್ ಜೋಡೋ ಎಂಬ ಬೃಹನ್ನಾಟಕ ಮಾಡುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ಭಾರತವನ್ನು ಜೋಡಿಸುವ ಆಸೆಯಿದ್ದರೆ, ಪಾಕಿಸ್ತಾನದಿಂದ ಭಾರತ್ ಜೋಡೋ ಯಾತ್ರೆ ಆರಂಭಿಸಲಿ’ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಅಖಂಡವಾಗಿದ್ದ ಭಾರತವನ್ನು ತುಂಡು ಮಾಡಿದ್ದು ಕಾಂಗ್ರೆಸ್.
ಅದೇ ಕಾಂಗ್ರೆಸ್ ಈಗ ಭಾರತ್ ಜೋಡೋ ಎಂಬ ಬೃಹನ್ನಾಟಕ ಮಾಡುತ್ತಿದೆ.
ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ಭಾರತವನ್ನು ಜೋಡಿಸುವ ಆಸೆಯಿದ್ದರೆ, ಪಾಕಿಸ್ಥಾನದಿಂದ ಭಾರತ್ ಜೋಡೋ ಯಾತ್ರೆ ಆರಂಭಿಸಲಿ.#CongressChodoYatra
‘ಭಾರತ ಒಗ್ಗೂಡಿಸಿ’ ಯಾತ್ರೆಯು ಇಂದು (ಸೆ. 7) ಆರಂಭವಾಗುತ್ತಿದ್ದು, ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ, ದೆಹಲಿ, ಪಂಜಾಬ್, ಚಂಡೀಗಡ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಗಳಲ್ಲಿ ಹಾದುಹೋಗಲಿದೆ.
ತಮಿಳುನಾಡಿನಲ್ಲಿ ಮೂರು ದಿನ ಕ್ರಮಿಸಿದ ನಂತರ, ಯಾತ್ರೆಯು ಸೆ. 11 ರಂದು ಕೇರಳ ಪ್ರವೇಶಿಸಲಿದೆ. ಕರ್ನಾಟಕದಲ್ಲಿ 21 ದಿನಗಳಲ್ಲಿ 511 ಕಿ.ಮೀ ಕ್ರಮಿಸಲಿದೆ. ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಯಾತ್ರೆಯ ತಲಾ 15-20 ದಿನ ಒಳಗೊಂಡಿರುತ್ತದೆ. 3-5 ದಿನಗಳಲ್ಲಿ ಇತರ ರಾಜ್ಯಗಳನ್ನು ಪೂರ್ಣಗೊಳಿಸಲಾಗುತ್ತದೆ ಎಂದು ಕಾಂಗ್ರೆಸ್ ಈಗಾಗಲೇ ಮಾಹಿತಿ ನೀಡಿದೆ.