<p><strong>ನವದೆಹಲಿ: </strong>ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಇತರ ಮುಖಂಡರೊಂದಿಗೆ ಸಂಜೆ ಮತ್ತೊಂದು ಸುತ್ತಿನ ಸಮಾಲೋಚನೆ ನಡೆಸಿದ ಬಳಿಕ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರ ಭೇಟಿಗಾಗಿ ಸೋಮವಾರ ಸಂಸತ್ ಭವನಕ್ಕೆ ತೆರಳುವ ಮುನ್ನ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಸಂಪುಟ ವಿಸ್ತರಣೆಗಾಗಿ ಪಕ್ಷವು ಪ್ರಮುಖ ಸೂತ್ರವೊಂದನ್ನು ಸಿದ್ಧಪಡಿಸಲಿದೆ. 'ಉಪ ಮುಖ್ಯಮಂತ್ರಿ ಯಾರಾಗಬೇಕು, ಎಷ್ಟು ಹಂತದಲ್ಲಿ ವಿಸ್ತರಣೆ ಆಗಬೇಕು, ಎಷ್ಟು ಜನ ಸಂಪುಟದಲ್ಲಿರಬೇಕು' ಎಂಬುದು ಆ ಸೂತ್ರದ ಭಾಗ ಎಂದು ಅವರು ಹೇಳಿದರು.</p>.<p>'ಬಿ.ಎಸ್. ಯಡಿಯೂರಪ್ಪ ಅವರ ಸಂಪುಟದಲ್ಲಿದ್ದ ಪ್ರಮುಖರನ್ನು ಹೊಸ ಸಂಪುಟದಲ್ಲಿ ಸೇರ್ಪಡೆ ಮಾಡಿಕೊಂಡು ಸಮತೋಲನ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗಿದೆ. ಪ್ರಾದೇಶಿಕತೆ, ಜಾತಿ, ಹಿರಿತನಕ್ಕೆ ಆದ್ಯತೆ ನೀಡುವ ಬಗ್ಗೆ ವರಿಷ್ಠರೇ ನಿರ್ಧರಿಸಲಿದ್ದಾರೆ ಎಂದು ಅವರು ತಿಳಿಸಿದರು.</p>.<p><strong>ಇದನ್ನೂ ಓದಿ: </strong><a href="https://www.prajavani.net/india-news/karnataka-cabinet-expansion-cm-basavaraj-bommai-in-delhi-to-meet-bjp-jp-nadda-853940.html">ಸಚಿವ ಸಂಪುಟ ವಿಸ್ತರಣೆ: ಸಂಜೆ ನಡ್ಡಾ–ಬೊಮ್ಮಾಯಿ ಭೇಟಿ | Prajavani</a></p>.<p>ಸೋಮವಾರ ಸಂಜೆ ಅಥವಾ ಮಂಗಳವಾರ ವರಿಷ್ಠರು ಅಂತಿಮ ಪಟ್ಟಿಗೆ ಸಮ್ಮತಿ ಸೂಚಿಸಿದರೆ ಬುಧವಾರದ ವೇಳೆಗೆ ಹೊಸ ಸಚಿವರ ಪ್ರಮಾಣವಚನ ಸಮಾರಂಭ ನಡೆಯಲಿದೆ. ಇಲ್ಲದಿದ್ದರೆ ಸಮಾರಂಭ ಮತ್ತಷ್ಟು ವಿಳಂಬ ಆಗಲಿದೆ ಎಂದು ಅವರು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಇತರ ಮುಖಂಡರೊಂದಿಗೆ ಸಂಜೆ ಮತ್ತೊಂದು ಸುತ್ತಿನ ಸಮಾಲೋಚನೆ ನಡೆಸಿದ ಬಳಿಕ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ಕೇಂದ್ರದ ಗೃಹ ಸಚಿವ ಅಮಿತ್ ಶಾ ಅವರ ಭೇಟಿಗಾಗಿ ಸೋಮವಾರ ಸಂಸತ್ ಭವನಕ್ಕೆ ತೆರಳುವ ಮುನ್ನ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಸಂಪುಟ ವಿಸ್ತರಣೆಗಾಗಿ ಪಕ್ಷವು ಪ್ರಮುಖ ಸೂತ್ರವೊಂದನ್ನು ಸಿದ್ಧಪಡಿಸಲಿದೆ. 'ಉಪ ಮುಖ್ಯಮಂತ್ರಿ ಯಾರಾಗಬೇಕು, ಎಷ್ಟು ಹಂತದಲ್ಲಿ ವಿಸ್ತರಣೆ ಆಗಬೇಕು, ಎಷ್ಟು ಜನ ಸಂಪುಟದಲ್ಲಿರಬೇಕು' ಎಂಬುದು ಆ ಸೂತ್ರದ ಭಾಗ ಎಂದು ಅವರು ಹೇಳಿದರು.</p>.<p>'ಬಿ.ಎಸ್. ಯಡಿಯೂರಪ್ಪ ಅವರ ಸಂಪುಟದಲ್ಲಿದ್ದ ಪ್ರಮುಖರನ್ನು ಹೊಸ ಸಂಪುಟದಲ್ಲಿ ಸೇರ್ಪಡೆ ಮಾಡಿಕೊಂಡು ಸಮತೋಲನ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಚರ್ಚೆ ನಡೆಸಲಾಗಿದೆ. ಪ್ರಾದೇಶಿಕತೆ, ಜಾತಿ, ಹಿರಿತನಕ್ಕೆ ಆದ್ಯತೆ ನೀಡುವ ಬಗ್ಗೆ ವರಿಷ್ಠರೇ ನಿರ್ಧರಿಸಲಿದ್ದಾರೆ ಎಂದು ಅವರು ತಿಳಿಸಿದರು.</p>.<p><strong>ಇದನ್ನೂ ಓದಿ: </strong><a href="https://www.prajavani.net/india-news/karnataka-cabinet-expansion-cm-basavaraj-bommai-in-delhi-to-meet-bjp-jp-nadda-853940.html">ಸಚಿವ ಸಂಪುಟ ವಿಸ್ತರಣೆ: ಸಂಜೆ ನಡ್ಡಾ–ಬೊಮ್ಮಾಯಿ ಭೇಟಿ | Prajavani</a></p>.<p>ಸೋಮವಾರ ಸಂಜೆ ಅಥವಾ ಮಂಗಳವಾರ ವರಿಷ್ಠರು ಅಂತಿಮ ಪಟ್ಟಿಗೆ ಸಮ್ಮತಿ ಸೂಚಿಸಿದರೆ ಬುಧವಾರದ ವೇಳೆಗೆ ಹೊಸ ಸಚಿವರ ಪ್ರಮಾಣವಚನ ಸಮಾರಂಭ ನಡೆಯಲಿದೆ. ಇಲ್ಲದಿದ್ದರೆ ಸಮಾರಂಭ ಮತ್ತಷ್ಟು ವಿಳಂಬ ಆಗಲಿದೆ ಎಂದು ಅವರು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>