<p><strong>ತಿರುಪತಿ: </strong>ತಿರುಮಲದ ಸಮೀಪ ಅಂದಾಜು ₹200 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಎರಡು ಬೃಹತ್ ‘ಯಾತ್ರಾರ್ಥಿ ಸಂಕೀರ್ಣ’ಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು.</p>.<p>ಈ ವೇಳೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ಮೋಹನ ರೆಡ್ಡಿ ಉಪಸ್ಥಿತರಿದ್ದರು. ರಾಜ್ಯದ ಭಕ್ತರ ಅನುಕೂಲಕ್ಕಾಗಿ ಕರ್ನಾಟಕ ಸರ್ಕಾರ ನೀಡಿರುವ ಯೋಜನೆಯಂತೆ, ಟಿಟಿಡಿ ಈ ಸಂಕೀರ್ಣ ಹಾಗೂ ಮದುವೆ ಸಭಾಂಗಣವನ್ನು ನಿರ್ಮಾಣ ಮಾಡಲಿದೆ ಎಂದು ದೇವಸ್ಥಾನದ ಅಧಿಕಾರಿಯೊಬ್ಬರು ತಿಳಿಸಿದರು. ಸಂಕೀರ್ಣ ನಿರ್ಮಾಣದ ಪೂರ್ಣ ವೆಚ್ಚವನ್ನು ಕರ್ನಾಟಕ ಸರ್ಕಾರವೇ ಭರಿಸಲಿದೆ ಎಂದರು.</p>.<p>‘ಶಂಕುಸ್ಥಾಪನೆಗೂ ಮುನ್ನ ಯಡಿಯೂರಪ್ಪ ಹಾಗೂ ಜಗನ್ಮೋಹನ ರೆಡ್ಡಿದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ವಿಶ್ವವನ್ನು ಕೋವಿಡ್–19ನಿಂದ ರಕ್ಷಿಸುವ ಉದ್ದೇಶದಿಂದ ಕಳೆದ ಮೂರು ತಿಂಗಳಿಂದ ನಡೆಸಲಾಗುತ್ತಿರುವ ‘ಸುಂದರಕಾಂಡ ಪಾರಾಯಣ’ದಲ್ಲೂ ಇಬ್ಬರೂ ಮುಖ್ಯಮಂತ್ರಿಗಳು ಭಾಗವಹಿಸಿದರು’ ಎಂದು ಅಧಿಕಾರಿ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿರುಪತಿ: </strong>ತಿರುಮಲದ ಸಮೀಪ ಅಂದಾಜು ₹200 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಎರಡು ಬೃಹತ್ ‘ಯಾತ್ರಾರ್ಥಿ ಸಂಕೀರ್ಣ’ಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಶಂಕುಸ್ಥಾಪನೆ ನೆರವೇರಿಸಿದರು.</p>.<p>ಈ ವೇಳೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ಮೋಹನ ರೆಡ್ಡಿ ಉಪಸ್ಥಿತರಿದ್ದರು. ರಾಜ್ಯದ ಭಕ್ತರ ಅನುಕೂಲಕ್ಕಾಗಿ ಕರ್ನಾಟಕ ಸರ್ಕಾರ ನೀಡಿರುವ ಯೋಜನೆಯಂತೆ, ಟಿಟಿಡಿ ಈ ಸಂಕೀರ್ಣ ಹಾಗೂ ಮದುವೆ ಸಭಾಂಗಣವನ್ನು ನಿರ್ಮಾಣ ಮಾಡಲಿದೆ ಎಂದು ದೇವಸ್ಥಾನದ ಅಧಿಕಾರಿಯೊಬ್ಬರು ತಿಳಿಸಿದರು. ಸಂಕೀರ್ಣ ನಿರ್ಮಾಣದ ಪೂರ್ಣ ವೆಚ್ಚವನ್ನು ಕರ್ನಾಟಕ ಸರ್ಕಾರವೇ ಭರಿಸಲಿದೆ ಎಂದರು.</p>.<p>‘ಶಂಕುಸ್ಥಾಪನೆಗೂ ಮುನ್ನ ಯಡಿಯೂರಪ್ಪ ಹಾಗೂ ಜಗನ್ಮೋಹನ ರೆಡ್ಡಿದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ವಿಶ್ವವನ್ನು ಕೋವಿಡ್–19ನಿಂದ ರಕ್ಷಿಸುವ ಉದ್ದೇಶದಿಂದ ಕಳೆದ ಮೂರು ತಿಂಗಳಿಂದ ನಡೆಸಲಾಗುತ್ತಿರುವ ‘ಸುಂದರಕಾಂಡ ಪಾರಾಯಣ’ದಲ್ಲೂ ಇಬ್ಬರೂ ಮುಖ್ಯಮಂತ್ರಿಗಳು ಭಾಗವಹಿಸಿದರು’ ಎಂದು ಅಧಿಕಾರಿ ತಿಳಿಸಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>