<p><strong>ನವದೆಹಲಿ:</strong> ‘ಬೆಂಗಳೂರು ಗುಲಾಬಿ ಈರುಳ್ಳಿ’ಗೆರಫ್ತು ನಿಷೇಧದಿಂದ ವಿನಾಯಿತಿ ನೀಡುವಂತೆ ಕೇಂದ್ರ ಸರ್ಕಾರವನ್ನು ಕರ್ನಾಟಕ ರೈತರು ಒತ್ತಾಯಿಸಿದ್ದಾರೆ.</p>.<p>ಕೋಲಾರ ಬಿಜೆಪಿ ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ ನೇತೃತ್ವದ ರೈತ ನಿಯೋಗ ಕೇಂದ್ರ ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರನ್ನು ಭೇಟಿ ಮಾಡಿ, ಈ ವಿಷಯವನ್ನು ಸಂಬಂಧಪಟ್ಟ ಸಚಿವರ ಗಮನಕ್ಕೆ ತರುವಂತೆ ಮನವಿ ಮಾಡಿದೆ.</p>.<p>‘ದೇಶೀಯ ಮಾರುಕಟ್ಟೆಯಲ್ಲಿ ಗುಲಾಬಿ ಈರುಳ್ಳಿಗೆ ಬೇಡಿಕೆಯಿಲ್ಲದೇ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ರೈತರು ಈ ವರ್ಷ 10,000 ಟನ್ಗಿಂತಲೂ ಹೆಚ್ಚು ಈರುಳ್ಳಿ ಬೆಳೆದಿದ್ದಾರೆ.ಈರುಳ್ಳಿ ಬೆಳೆ ನಾಶವಾಗುವುದನ್ನು ತಡೆಯಲು ರಫ್ತಿಗೆ ಅವಕಾಶ ಕಲ್ಪಿಸಬೇಕು’ ಎಂದು ನಿಯೋಗ ತಿಳಿಸಿದೆ.</p>.<p>ರೈತರ ಸಮಸ್ಯೆಯನ್ನು ಕೇಂದ್ರ ವಾಣಿಜ್ಯ ಮತ್ತು ಕೃಷಿ ಸಚಿವರ ಗಮನಕ್ಕೆ ತರುವುದಾಗಿ ಸದಾನಂದ ಗೌಡ ಅವರು ಭರವಸೆ ನೀಡಿದ್ದಾರೆ ಎಂದು ಅವರ ಕಚೇರಿ ಹೇಳಿಕೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಬೆಂಗಳೂರು ಗುಲಾಬಿ ಈರುಳ್ಳಿ’ಗೆರಫ್ತು ನಿಷೇಧದಿಂದ ವಿನಾಯಿತಿ ನೀಡುವಂತೆ ಕೇಂದ್ರ ಸರ್ಕಾರವನ್ನು ಕರ್ನಾಟಕ ರೈತರು ಒತ್ತಾಯಿಸಿದ್ದಾರೆ.</p>.<p>ಕೋಲಾರ ಬಿಜೆಪಿ ಲೋಕಸಭಾ ಸದಸ್ಯ ಎಸ್.ಮುನಿಸ್ವಾಮಿ ನೇತೃತ್ವದ ರೈತ ನಿಯೋಗ ಕೇಂದ್ರ ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಅವರನ್ನು ಭೇಟಿ ಮಾಡಿ, ಈ ವಿಷಯವನ್ನು ಸಂಬಂಧಪಟ್ಟ ಸಚಿವರ ಗಮನಕ್ಕೆ ತರುವಂತೆ ಮನವಿ ಮಾಡಿದೆ.</p>.<p>‘ದೇಶೀಯ ಮಾರುಕಟ್ಟೆಯಲ್ಲಿ ಗುಲಾಬಿ ಈರುಳ್ಳಿಗೆ ಬೇಡಿಕೆಯಿಲ್ಲದೇ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ರೈತರು ಈ ವರ್ಷ 10,000 ಟನ್ಗಿಂತಲೂ ಹೆಚ್ಚು ಈರುಳ್ಳಿ ಬೆಳೆದಿದ್ದಾರೆ.ಈರುಳ್ಳಿ ಬೆಳೆ ನಾಶವಾಗುವುದನ್ನು ತಡೆಯಲು ರಫ್ತಿಗೆ ಅವಕಾಶ ಕಲ್ಪಿಸಬೇಕು’ ಎಂದು ನಿಯೋಗ ತಿಳಿಸಿದೆ.</p>.<p>ರೈತರ ಸಮಸ್ಯೆಯನ್ನು ಕೇಂದ್ರ ವಾಣಿಜ್ಯ ಮತ್ತು ಕೃಷಿ ಸಚಿವರ ಗಮನಕ್ಕೆ ತರುವುದಾಗಿ ಸದಾನಂದ ಗೌಡ ಅವರು ಭರವಸೆ ನೀಡಿದ್ದಾರೆ ಎಂದು ಅವರ ಕಚೇರಿ ಹೇಳಿಕೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>