ಮುಂಬೈ: ‘ಛತ್ರಪತಿ ಶಿವಾಜಿಗೆ ಅಪಮಾನ ಮಾಡುವ ಕೃತ್ಯಕ್ಕೆ ಕ್ಷಮೆಯೇ ಇಲ್ಲ. ಕರ್ನಾಟಕ ಸರ್ಕಾರ ಅವರ ಪ್ರತಿಮೆಗೆ ಹೆಚ್ಚಿನ ಗೌರವ ನೀಡಬೇಕು’ ಎಂದು ಮಹಾರಾಷ್ಟ್ರದ ಸಚಿವ ಏಕನಾಥ್ ಶಿಂಧೆ ಪ್ರತಿಪಾದಿಸಿದ್ದಾರೆ.
ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದ ಬೆಂಗಳೂರು ಘಟನೆಯನ್ನು ಉಲ್ಲೇಖಿಸಿ ವಿಧಾನಪರಿಷತ್ತಿನಲ್ಲಿ ಹೇಳಿಕೆ ನೀಡಿದ ಅವರು, ಘಟನೆ ಖಂಡನಾರ್ಹ. ಕರ್ನಾಟಕ ಸರ್ಕಾರ ಎಂದಿಗೂ ಅಲ್ಲಿ ನೆಲೆಸಿರುವ ಮರಾಠಿಗರ ಬಗ್ಗೆ ತಾರತಮ್ಯ ನಿಲುವು ತಳೆದಿದೆ‘ ಎಂದು ಆರೋಪಿಸಿದರು.
‘ಪ್ರಧಾನ ಮಂತ್ರಿ ಮೋದಿ ಅವರೇ ಹಲವು ಬಾರಿ ಶಿವಾಜಿ ಅವರ ಕೊಡುಗೆಯನ್ನು ಸ್ಮರಿಸಿದ್ದಾರೆ. ಕರ್ನಾಟಕ ಸರ್ಕಾರವು ಅವರಿಗೆ ಹೆಚ್ಚಿನ ಗೌರವ ನೀಡಬೇಕಾಗಿದೆ’ ಎಂದರು.