ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕದಲ್ಲಿ ಬಿಜೆಪಿ– ಜೆಡಿಎಸ್ ಮುಸುಕಿನ ಮೈತ್ರಿ ಬಹಿರಂಗವಾಗಿದೆ: ಸುರ್ಜೇವಾಲ

ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ರಾಷ್ಟ್ರಪತಿ ಅಭ್ಯರ್ಥಿಯನ್ನು ಜೆಡಿಎಸ್‌ ಬೆಂಬಲಿಸಲು ಮುಗಿಬಿದ್ದಿದೆ ಎಂದು ಕಾಂಗ್ರೆಸ್‌ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲ ಹರಿಹಾಯ್ದಿದ್ದಾರೆ.

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಅವರು, ‘ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಸುಕಿನ ಮೈತ್ರಿ ಬಹಿರಂಗವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಜೂನ್ 15 ರಂದು ದೆಹಲಿಯಲ್ಲಿ ನಡೆದ ಪ್ರತಿಪಕ್ಷಗಳ ಸಭೆಯಲ್ಲಿ ಭಾಗವಹಿಸಿದ ಜೆಡಿಎಸ್‌, ಸಾಮಾನ್ಯ ರಾಷ್ಟ್ರಪತಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿತು. ಈಗ ಬಿಜೆಪಿ ರಾಷ್ಟ್ರಪತಿ ಅಭ್ಯರ್ಥಿಯನ್ನು ಬೆಂಬಲಿಸಲು ಮುಗಿಬಿದ್ದಿದೆ. ಇದರಿಂದಬಿಜೆಪಿಯ ಬಿ-ಟೀಂ ಬಂಡವಾಳ ಬಯಲಾಗಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT