ಬೆಂಗಳೂರು: ಬಿಜೆಪಿ ರಾಷ್ಟ್ರಪತಿ ಅಭ್ಯರ್ಥಿಯನ್ನು ಜೆಡಿಎಸ್ ಬೆಂಬಲಿಸಲು ಮುಗಿಬಿದ್ದಿದೆ ಎಂದು ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್ ಸುರ್ಜೇವಾಲ ಹರಿಹಾಯ್ದಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ‘ಕರ್ನಾಟಕದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮುಸುಕಿನ ಮೈತ್ರಿ ಬಹಿರಂಗವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಜೂನ್ 15 ರಂದು ದೆಹಲಿಯಲ್ಲಿ ನಡೆದ ಪ್ರತಿಪಕ್ಷಗಳ ಸಭೆಯಲ್ಲಿ ಭಾಗವಹಿಸಿದ ಜೆಡಿಎಸ್, ಸಾಮಾನ್ಯ ರಾಷ್ಟ್ರಪತಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿತು. ಈಗ ಬಿಜೆಪಿ ರಾಷ್ಟ್ರಪತಿ ಅಭ್ಯರ್ಥಿಯನ್ನು ಬೆಂಬಲಿಸಲು ಮುಗಿಬಿದ್ದಿದೆ. ಇದರಿಂದಬಿಜೆಪಿಯ ಬಿ-ಟೀಂ ಬಂಡವಾಳ ಬಯಲಾಗಿದೆ’ ಎಂದು ತಿಳಿಸಿದ್ದಾರೆ.
The tacit understanding between BJP & JD(S) in Karnataka is out in the open.
JD(S) attended Opposition Meet in Delhi on 15 June & resolved to field a common Presidential Candidate.
JD(S) has now somersaulted to support BJP’s Presidential Candidate.
BJP’s B-Team stands exposed.
— Randeep Singh Surjewala (@rssurjewala) June 30, 2022