ಪಾಟೀಲ್, ಬಿಜೆಪಿಯ ಹಿರಿಯ ನಾಯಕ. ದೇಸಾಯಿ, ಮುಖ್ಯಮಂತ್ರಿ ಶಿಂದೆ ಬಣದ ಶಿವಸೇನಾ ನಾಯಕರು. ಸೋಮವಾರ ನಡೆದ ಸಭೆಯಲ್ಲಿ ನೋಡಲ್ ಸಚಿವರ ನೇಮಕದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕರ್ನಾಟಕ ಸರ್ಕಾರದೊಂದಿಗೆ ದೈನಂದಿನ ವ್ಯವಹಾರ ಮತ್ತು ಮರಾಠಿ ಬಳಕೆ ಕುರಿತು ಸೂಕ್ತ ಸಂವಹನ ನಡೆಸುವಂತೆ ಮುಖ್ಯಮಂತ್ರಿ ಏಕನಾಥ್ ಶಿಂದೆ ಅವರು ಬೆಳಗಾವಿ ಮತ್ತು ನೆರೆಯ ಪ್ರದೇಶಗಳ ನಿವಾಸಿಗಳ ನಿಯೋಗಕ್ಕೆ ಕೇಳಿಕೊಂಡರು.