‘ಛೋಟ್ಟನಿಕ್ಕರಾ ಭಗವತಿ ದೇವಾಲಯಕ್ಕೆ ಐದು ವರ್ಷಗಳ ಹಿಂದೆ ಭೇಟಿ ನೀಡಿದ್ದೆ. ನಂತರ ವ್ಯಾಪಾರದಲ್ಲಿ ಅಪಾರ ಪ್ರಗತಿ ಸಾಧಿಸಿದೆ. ಎಲ್ಲ ರೀತಿಯಿಂದ ಒಳ್ಳೆಯದಾಗಿದೆ. ಹೀಗಾಗಿ, ದೇವಸ್ಥಾನಕ್ಕೆ ದೇಣಿಗೆ ನೀಡಿದ್ದೇನೆ. ದೇವಸ್ಥಾನದ ನವೀಕರಣ, ಹೊಸ ಗೋಪುರಗಳ ನಿರ್ಮಾಣ, ಕಲ್ಯಾಣ ಮಂಟಪ, ತ್ಯಾಜ್ಯ ಸಂಸ್ಕರಣಾ ಘಟಕ, ಪಾರ್ಕಿಂಗ್ ಸೌಲಭ್ಯ ಮತ್ತು ದೇವಸ್ಥಾನಕ್ಕೆ ತೆರಳುವ ರಸ್ತೆ ಅಭಿವೃದ್ಧಿಗೆ ದೇಣಿಗೆ ಹಣವನ್ನು ಬಳಸುವಂತೆ ಸೂಚಿಸಿದ್ದೇನೆ. ಆಸ್ಪತ್ರೆಯನ್ನು ಸಹ ನಿರ್ಮಿಸುವ ಉದ್ದೇಶವಿದೆ’ ಎಂದು ಶ್ರವಣ್ ವಿವರಿಸಿದ್ದಾರೆ.