ರಾಜ್ಯದಲ್ಲಿ ಅಕ್ರಮವಾಗಿ ವಾಸಿಸುತ್ತಿರುವ ರೋಹಿಂಗ್ಯಾಗಳನ್ನು ಗಡಿಪಾರು ಮಾಡಲು ನಿರ್ದೇಶನ ನೀಡುವಂತೆ ಕೋರಿ ಬಿಜೆಪಿ ಮುಖಂಡ, ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು 2017ರಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಗೆ ಸಂಬಂಧಿಸಿದಂತೆ ಅಕ್ಟೋಬರ್ ಮೊದಲ ವಾರ ನ್ಯಾಯಪೀಠಕ್ಕೆ ಲಿಖಿತ ಹೇಳಿಕೆ ಸಲ್ಲಿಸಿದ್ದ ರಾಜ್ಯ ಸರ್ಕಾರ, ವಿಚಾರಣೆಗೆ ಅರ್ಹವಲ್ಲದ ಹಾಗೂ ಸಮರ್ಥನೀಯವಲ್ಲದ ಈ ಅರ್ಜಿಯನ್ನು ವಜಾಗೊಳಿಸಬೇಕು ಎಂದು ಮನವಿ ಮಾಡಿತ್ತು.