<p><strong>ನವದೆಹಲಿ: </strong>ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿನ ಗಣಿಗಳಿಂದ ಹೊರತೆಗೆಯಲಾದ ಕಬ್ಬಿಣದ ಅದಿರಿನ ರಫ್ತಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ.</p>.<p>ಅದಿರು ರಫ್ತಿಗೆ ಅವಕಾಶ ಕೋರಿ ಗಣಿ ಮಾಲೀಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠವು, ಅದಿರು ರಫ್ತಿಗೆ 11 ವರ್ಷಗಳ ನಂತರ ಹಸಿರು ನಿಶಾನೆ ನೀಡಿದೆ.</p>.<p>ಇ–ಹರಾಜು ಮೂಲಕ ಅದಿರು ಖರೀದಿಸುವುದಕ್ಕೆ ಸಾಕಷ್ಟು ಸಮಸ್ಯೆಗಳು ಇರುವುದರಿಂದ ಮಾರಾಟ ಪ್ರಕ್ರಿಯೆ ನೀರಸವಾಗಿತ್ತು ಎಂದು ಹೇಳಿರುವ ಪೀಠ, ಇ–ಹರಾಜಿನ ಮೂಲಕ ರಾಜ್ಯದಲ್ಲಿ ಅದಿರು ಮಾರಾಟಕ್ಕೆ ಇದ್ದ ಕೆಲವು ಕಠಿಣ ನಿಯಮಗಳನ್ನು ಸಡಿಲಗೊಳಿಸಿ ಆದೇಶ ಹೊರಡಿಸಿದೆ.</p>.<p>ಇದರಿಂದಾಗಿ ಉಕ್ಕು ಉತ್ಪಾದನಾ ಘಟಕಗಳು ಸ್ಥಳೀಯವಾಗಿ ಅದಿರು ಖರೀದಿಸಲು ಇದ್ದ ಕಠಿಣ ನಿಯಮಗಳಿಂದ ರಿಯಾಯಿತಿ ದೊರೆತಂತಾಗಿದೆ.</p>.<p>ರಾಜ್ಯದ ಗಣಿಗಳಿಂದ ಹೊರ ತೆಗೆಯಲಾದ ಕಬ್ಬಿಣದ ಅದಿರನ್ನು ರಫ್ತು ಮಾಡುವ ಕುರಿತು ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ಕೇಂದ್ರ ಮತ್ತು ಕರ್ನಾಟಕ ಸರ್ಕಾರಗಳಿಗೆ ಸೂಚಿಸಿತ್ತು.</p>.<p>ಇದಕ್ಕೆ ಕಳೆದ ತಿಂಗಳು ಪ್ರತಿಕ್ರಿಯೆ ನೀಡಿದ್ದ ಕರ್ನಾಟಕ ಸರ್ಕಾರ, ಅದಿರು ರಫ್ತಿನ ವಿರುದ್ಧ ತನ್ನ ನಿಲುವು<br />ಸ್ಪಷ್ಟಪಡಿಸಿತ್ತು.</p>.<p>ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಮತ್ತು ಜಿಲ್ಲೆಗಳಲ್ಲಿನ ಗಣಿಗಳಿಂದ ಅದಿರು ರಫ್ತು ಮಾಡುವುದಕ್ಕೆ ಸುಪ್ರೀಂ ಕೋರ್ಟ್ 2011ರಿಂದ ನಿಷೇಧ ಹೇರಿತ್ತು.</p>.<p>ಅಕ್ರಮ ಗಣಿಗಾರಿಕೆ ತಡೆಯುವ ನಿಟ್ಟಿನಲ್ಲಿ ಅದಿರು ರಫ್ತು ನಿಷೇಧಿಸಬೇಕು, ಅದಿರು ಮಾರಾಟದ ಮೇಲೂ ಕಠಿಣ ಕ್ರಮ ಜರುಗಿಸಿ ನಿಯಮಾವಳಿ ರೂಪಿಸಬೇಕು ಎಂದು ಕೋರಿ ಧಾರವಾಡದ ಸಮಾಜ ಪರಿವರ್ತನಾ ಸಮುದಾಯ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿನ ಗಣಿಗಳಿಂದ ಹೊರತೆಗೆಯಲಾದ ಕಬ್ಬಿಣದ ಅದಿರಿನ ರಫ್ತಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಅನುಮತಿ ನೀಡಿದೆ.</p>.<p>ಅದಿರು ರಫ್ತಿಗೆ ಅವಕಾಶ ಕೋರಿ ಗಣಿ ಮಾಲೀಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ಪೀಠವು, ಅದಿರು ರಫ್ತಿಗೆ 11 ವರ್ಷಗಳ ನಂತರ ಹಸಿರು ನಿಶಾನೆ ನೀಡಿದೆ.</p>.<p>ಇ–ಹರಾಜು ಮೂಲಕ ಅದಿರು ಖರೀದಿಸುವುದಕ್ಕೆ ಸಾಕಷ್ಟು ಸಮಸ್ಯೆಗಳು ಇರುವುದರಿಂದ ಮಾರಾಟ ಪ್ರಕ್ರಿಯೆ ನೀರಸವಾಗಿತ್ತು ಎಂದು ಹೇಳಿರುವ ಪೀಠ, ಇ–ಹರಾಜಿನ ಮೂಲಕ ರಾಜ್ಯದಲ್ಲಿ ಅದಿರು ಮಾರಾಟಕ್ಕೆ ಇದ್ದ ಕೆಲವು ಕಠಿಣ ನಿಯಮಗಳನ್ನು ಸಡಿಲಗೊಳಿಸಿ ಆದೇಶ ಹೊರಡಿಸಿದೆ.</p>.<p>ಇದರಿಂದಾಗಿ ಉಕ್ಕು ಉತ್ಪಾದನಾ ಘಟಕಗಳು ಸ್ಥಳೀಯವಾಗಿ ಅದಿರು ಖರೀದಿಸಲು ಇದ್ದ ಕಠಿಣ ನಿಯಮಗಳಿಂದ ರಿಯಾಯಿತಿ ದೊರೆತಂತಾಗಿದೆ.</p>.<p>ರಾಜ್ಯದ ಗಣಿಗಳಿಂದ ಹೊರ ತೆಗೆಯಲಾದ ಕಬ್ಬಿಣದ ಅದಿರನ್ನು ರಫ್ತು ಮಾಡುವ ಕುರಿತು ತಮ್ಮ ನಿಲುವನ್ನು ಸ್ಪಷ್ಟಪಡಿಸುವಂತೆ ಸುಪ್ರೀಂ ಕೋರ್ಟ್ ಇತ್ತೀಚೆಗೆ ಕೇಂದ್ರ ಮತ್ತು ಕರ್ನಾಟಕ ಸರ್ಕಾರಗಳಿಗೆ ಸೂಚಿಸಿತ್ತು.</p>.<p>ಇದಕ್ಕೆ ಕಳೆದ ತಿಂಗಳು ಪ್ರತಿಕ್ರಿಯೆ ನೀಡಿದ್ದ ಕರ್ನಾಟಕ ಸರ್ಕಾರ, ಅದಿರು ರಫ್ತಿನ ವಿರುದ್ಧ ತನ್ನ ನಿಲುವು<br />ಸ್ಪಷ್ಟಪಡಿಸಿತ್ತು.</p>.<p>ಕರ್ನಾಟಕದ ಬಳ್ಳಾರಿ, ಚಿತ್ರದುರ್ಗ ಮತ್ತು ಜಿಲ್ಲೆಗಳಲ್ಲಿನ ಗಣಿಗಳಿಂದ ಅದಿರು ರಫ್ತು ಮಾಡುವುದಕ್ಕೆ ಸುಪ್ರೀಂ ಕೋರ್ಟ್ 2011ರಿಂದ ನಿಷೇಧ ಹೇರಿತ್ತು.</p>.<p>ಅಕ್ರಮ ಗಣಿಗಾರಿಕೆ ತಡೆಯುವ ನಿಟ್ಟಿನಲ್ಲಿ ಅದಿರು ರಫ್ತು ನಿಷೇಧಿಸಬೇಕು, ಅದಿರು ಮಾರಾಟದ ಮೇಲೂ ಕಠಿಣ ಕ್ರಮ ಜರುಗಿಸಿ ನಿಯಮಾವಳಿ ರೂಪಿಸಬೇಕು ಎಂದು ಕೋರಿ ಧಾರವಾಡದ ಸಮಾಜ ಪರಿವರ್ತನಾ ಸಮುದಾಯ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>