ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಸಮೀಪದ ರಂಗನತಿಟ್ಟು ಪಕ್ಷಿಧಾಮ ದಲ್ಲಿ 188 ಪ್ರಭೇದದ ಮರಗಳು, 225 ಪ್ರಭೇದದ ಪಕ್ಷಿಗಳು, 69 ಜಾತಿಯ ಮೀನುಗಳು, 13 ಪ್ರಭೇ ದದ ಕಪ್ಪೆಗಳು ಹಾಗೂ 30 ಪ್ರಭೇದದ ಚಿಟ್ಟೆಗಳು ಇವೆ. ಇದು ಭಾರತದ ಪ್ರಮುಖ ಪಕ್ಷಿಧಾಮ ಎಂದು ಬಾಂಬೆ ನ್ಯಾಚುರಲ್ ಹಿಸ್ಟರಿ ಸೊಸೈಟಿ ಈ ಹಿಂದೆ ಗುರುತಿಸಿತ್ತು. ರಂಗನತಿಟ್ಟು ಪಕ್ಷಿಧಾಮ, ಬಳ್ಳಾರಿಯ ಅಂಕಸಮುದ್ರ, ಗದಗ ಜಿಲ್ಲೆಯ ಮಾಗಡಿ ಕೆರೆ ಹಾಗೂ ಉತ್ತರ ಕನ್ನಡದ ಅಘನಾಶಿನಿ ಜೌಗುಪ್ರದೇಶಗಳನ್ನು ರಾಮ್ಸಾರ್ ಪಟ್ಟಿಗೆ ಸೇರಿಸಬೇಕು ಎಂದು ಕರ್ನಾಟಕ ಅರಣ್ಯ ಹಾಗೂ ಪರಿಸರ ಇಲಾಖೆಯು ಕೇಂದ್ರ ಅರಣ್ಯ ಇಲಾಖೆಗೆ ಕಳೆದ ವರ್ಷ ಪ್ರಸ್ತಾವನೆ ಸಲ್ಲಿಸಿತ್ತು.