<p><strong>ಶ್ರೀನಗರ:</strong> ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ವಕೀಲರ ಸಂಘವು (ಜೆಕೆಎಚ್ಸಿಬಿಎ) ಮಂಗಳವಾರ ಚುನಾವಣೆ ಮುಂದೂಡಿದೆ.</p>.<p>ರಾಜ್ಯದಲ್ಲಿ ಶಾಂತಿ ಕದಡಿದ ಆರೋಪದಡಿ ಹೋದ ವರ್ಷದ ಆಗಸ್ಟ್ನಲ್ಲಿ ಸಂಘದ ಅಧ್ಯಕ್ಷ ಮಿಯಾ ಅಬ್ದುಲ್ ಖಯ್ಯೂಂ ಅವರನ್ನು ಬಂಧಿಸಿ ಜೈಲಿಗೆ ಅಟ್ಟಲಾಗಿತ್ತು. ನಂತರ ಕೋವಿಡ್ ಬಿಕ್ಕಟ್ಟು ಸೃಷ್ಟಿಯಾಗಿದ್ದರಿಂದ ಸಂಘದ ಚುನಾವಣೆಯು ತಡವಾಗಿತ್ತು.</p>.<p>ಚುನಾವಣೆ ನಡೆಸಲು ಅನುಮತಿ ನೀಡುವಂತೆ ಸಂಘವು ಶ್ರೀನಗರದ ಆಡಳಿತಕ್ಕೆ ಮನವಿ ಮಾಡಿತ್ತು.</p>.<p>‘ಜಮ್ಮ ಮತ್ತು ಕಾಶ್ಮೀರದ ವಿಷಯದಲ್ಲಿ ಸಂಘದ ನಿಲುವು ಏನು ಎಂಬುದನ್ನು ಸ್ಪಷ್ಟಪಡಿಸದ ಹೊರತು ಚುನಾವಣೆ ನಡೆಸಲು ಅನುಮತಿ ಕೊಡಲಾಗುವುದಿಲ್ಲ’ ಎಂದು ಶ್ರೀನಗರದ ಜಿಲ್ಲಾಧಿಕಾರಿ ಶಾಹೀದ್ ಚೌಧರಿ ಸೋಮವಾರ ತಿಳಿಸಿದ್ದರು.</p>.<p>‘ಮಂಗಳವಾರ ನಿಗದಿಯಾಗಿದ್ದ ಚುನಾವಣೆಯನ್ನು ಮುಂದಕ್ಕೆ ಹಾಕಲು ತೀರ್ಮಾನಿಸಿದ್ದೇವೆ. ಹೊಸ ದಿನಾಂಕವನ್ನು ಶೀಘ್ರವೇ ಪ್ರಕಟಿಸುತ್ತೇವೆ’ ಎಂದು ಸಂಘದ ಚುನಾವಣಾ ಆಯುಕ್ತ ಹಾಗೂ ವಕೀಲ ಮುದಾಸಿರ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ:</strong> ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ ವಕೀಲರ ಸಂಘವು (ಜೆಕೆಎಚ್ಸಿಬಿಎ) ಮಂಗಳವಾರ ಚುನಾವಣೆ ಮುಂದೂಡಿದೆ.</p>.<p>ರಾಜ್ಯದಲ್ಲಿ ಶಾಂತಿ ಕದಡಿದ ಆರೋಪದಡಿ ಹೋದ ವರ್ಷದ ಆಗಸ್ಟ್ನಲ್ಲಿ ಸಂಘದ ಅಧ್ಯಕ್ಷ ಮಿಯಾ ಅಬ್ದುಲ್ ಖಯ್ಯೂಂ ಅವರನ್ನು ಬಂಧಿಸಿ ಜೈಲಿಗೆ ಅಟ್ಟಲಾಗಿತ್ತು. ನಂತರ ಕೋವಿಡ್ ಬಿಕ್ಕಟ್ಟು ಸೃಷ್ಟಿಯಾಗಿದ್ದರಿಂದ ಸಂಘದ ಚುನಾವಣೆಯು ತಡವಾಗಿತ್ತು.</p>.<p>ಚುನಾವಣೆ ನಡೆಸಲು ಅನುಮತಿ ನೀಡುವಂತೆ ಸಂಘವು ಶ್ರೀನಗರದ ಆಡಳಿತಕ್ಕೆ ಮನವಿ ಮಾಡಿತ್ತು.</p>.<p>‘ಜಮ್ಮ ಮತ್ತು ಕಾಶ್ಮೀರದ ವಿಷಯದಲ್ಲಿ ಸಂಘದ ನಿಲುವು ಏನು ಎಂಬುದನ್ನು ಸ್ಪಷ್ಟಪಡಿಸದ ಹೊರತು ಚುನಾವಣೆ ನಡೆಸಲು ಅನುಮತಿ ಕೊಡಲಾಗುವುದಿಲ್ಲ’ ಎಂದು ಶ್ರೀನಗರದ ಜಿಲ್ಲಾಧಿಕಾರಿ ಶಾಹೀದ್ ಚೌಧರಿ ಸೋಮವಾರ ತಿಳಿಸಿದ್ದರು.</p>.<p>‘ಮಂಗಳವಾರ ನಿಗದಿಯಾಗಿದ್ದ ಚುನಾವಣೆಯನ್ನು ಮುಂದಕ್ಕೆ ಹಾಕಲು ತೀರ್ಮಾನಿಸಿದ್ದೇವೆ. ಹೊಸ ದಿನಾಂಕವನ್ನು ಶೀಘ್ರವೇ ಪ್ರಕಟಿಸುತ್ತೇವೆ’ ಎಂದು ಸಂಘದ ಚುನಾವಣಾ ಆಯುಕ್ತ ಹಾಗೂ ವಕೀಲ ಮುದಾಸಿರ್ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>