ರಾಹುಲ್ ಭಟ್ ಹತ್ಯೆಯಾದ ಸರ್ಕಾರಿ ನೌಕರ. ‘ಚದೂರು ಪಟ್ಟಣದ ತಹಶೀಲ್ ಕಚೇರಿಯಲ್ಲಿ ಗುಮಸ್ತರಾಗಿ ಕೆಲಸ ನಿರ್ವಹಿಸುತ್ತಿದ್ದು, ಗುರುವಾರ ರಾಹುಲ್ ಭಟ್ ಅವರ ಕೊಠಡಿಯನ್ನು ಏಕಾಏಕಿ ಪ್ರವೇಶಿಸಿದ ಉಗ್ರ ಗುಂಡು ಹಾರಿಸಿದ್ದಾನೆ. ಈ ವೇಳೆ ಗುಂಡೇಟಿನಿಂದ ತೀವ್ರ ಗಾಯಗೊಂಡಿದ್ದ ರಾಹುಲ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.