ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಹಾರಧನ ವಿತರಣೆಯಲ್ಲಿ ವಿಳಂಬ: ಕಾಶ್ಮೀರಿ ಪಂಡಿತರಿಂದ ಪ್ರತಿಭಟನೆ

Last Updated 18 ಸೆಪ್ಟೆಂಬರ್ 2021, 12:16 IST
ಅಕ್ಷರ ಗಾತ್ರ

ಜಮ್ಮು: ಮಾಸಿಕ ಪರಿಹಾರಧನ ವಿತರಣೆಯಲ್ಲಿ ಆಗುತ್ತಿರುವ ವಿಳಂಬವನ್ನು ಖಂಡಿಸಿ ನೂರಾರು ಜನ ಕಾಶ್ಮೀರಿ ಪಂಡಿತರು ಶನಿವಾರ ಇಲ್ಲಿ ಪ್ರತಿಭಟಿಸಿದರು.

ಜಮ್ಮು–ಶ್ರೀನಗರ ರಾಷ್ಟ್ರಿಯ ಹೆದ್ದಾರಿಯನ್ನು ಬಂದ್‌ ಮಾಡಲು ಪ್ರತಿಭಟನಕಾರರು ಪ್ರಯತ್ನಿಸಿದರೂ, ಪೊಲೀಸರು ಅದಕ್ಕೆ ಅವಕಾಶ ನೀಡಲಿಲ್ಲ.

ನಗರದ ಹೊರವಲಯದಲ್ಲಿರುವ ಜಾಗ್ತಿ ವಲಸಿಗರ ಕೇಂದ್ರದಿಂದ ಮೆರವಣಿಗೆಯಲ್ಲಿ ಹೊರಟ ಪ್ರತಿಭಟನಕಾರರು, ಆಗಸ್ಟ್ ತಿಂಗಳ ಪರಿಹಾರಧನವನ್ನು ಕೂಡಲೇ ಬಿಡುಗಡೆ ಮಾಡುವಂತೆ ಘೋಷಣೆಗಳನ್ನು ಕೂಗಿದರು.

ತಕ್ಷಣವೇ ಪರಿಹಾಧನವನ್ನು ಬಿಡುಗಡೆ ಮಾಡದಿದ್ದರೆ, ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದೂ ಎಚ್ಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT