ಕಥುವಾ ಪ್ರಕರಣ ಸಂಬಂಧ ಎರಡು ಮಾಧ್ಯಮ ಸಂಸ್ಥೆಗಳಿಂದ ಇತ್ತೀಚೆಗೆ ತಲಾ ₹10 ಲಕ್ಷದಂತೆ ಒಟ್ಟು ₹20 ಲಕ್ಷವನ್ನು ನ್ಯಾಯಾಲಯದಲ್ಲಿ ಠೇವಣಿ ಇರಿಸಲಾಗಿತ್ತು. ಇದರ ಜತೆಗೆ, ಈ ಹಿಂದೆ ಇತರ ಪ್ರಕರಣಗಳಲ್ಲಿ ಇಟ್ಟಿರುವ ಠೇವಣಿ ಹಣವನ್ನು ಜಮ್ಮು ಮತ್ತು ಕಾಶ್ಮೀರ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ವಹಿಸುವ ಲೈಂಗಿಕ ದೌರ್ಜನ್ಯದ ಸಂತ್ರಸ್ತರ ಪರಿಹಾರ ನಿಧಿಗೆ ವರ್ಗಾಯಿಸುವಂತೆ ಮುಖ್ಯ ನ್ಯಾಯಮೂರ್ತಿ ಸತೀಶ್ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಹ್ಮಣಿಯಂ ಪ್ರಸಾದ್ ಅವರಿದ್ದ ಪೀಠವು, ಹೈಕೋರ್ಟ್ ಜನರಲ್ ರಿಜಿಸ್ಟ್ರಾರ್ಗೆ ನಿರ್ದೇಶಿಸಿದೆ.