ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣೆ ಎದುರಿಸಲು ಮೋದಿಗಿಂತ ಮೊದಲು ಇಡಿ ಬಂದಿದೆ: ಕೆಸಿಆರ್‌ ಪುತ್ರಿ ವ್ಯಂಗ್ಯ

'ಜೈಲಿಗೆ ಹಾಕಿ, ಹೆದರುವುದಿಲ್ಲ' ಎಂದು ಕೇಂದ್ರ ಸರ್ಕಾರಕ್ಕೆ ಸವಾಲು
Last Updated 1 ಡಿಸೆಂಬರ್ 2022, 12:47 IST
ಅಕ್ಷರ ಗಾತ್ರ

ಹೈದರಾಬಾದ್‌: ‘ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ನನ್ನನ್ನು ಜೈಲಿಗೆ ಕಳುಹಿಸಿ. ಆದರೆ ನಾನು ಹೆದರುವುದಿಲ್ಲ’ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ (ಕೆಸಿಆರ್‌) ಅವರ ಪುತ್ರಿ ಕೆ. ಕವಿತಾ ಅವರು ಗುರುವಾರ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ.

ಪ್ರಕರಣದ ಆರೋಪಿ ಅಮಿತ್‌ ಅರೋರಾ ಅವರ ರಿಮಾಂಡ್‌ ವರದಿಯಲ್ಲಿ ಜಾರಿ ನಿರ್ದೇಶನಾಲಯವು (ಇ.ಡಿ) ತಮ್ಮ ಹೆಸರು ಉಲ್ಲೇಖಿಸಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ‘ಇದು ಬಿಜೆಪಿಯ ರಾಜಕೀಯ ಪಿತೂರಿ’ ಎಂದು ಆರೋಪಿಸಿದ್ದಾರೆ.

‘ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಮೋದಿ ಅವರು ಬರುವುದಕ್ಕಿಂತಲೂ ಮೊದಲೇ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಭೇಟಿ ನೀಡುವುದು ಸಾಮಾನ್ಯ. ನಿಮ್ಮ ಇ.ಡಿ, ಸಿಬಿಐ ತಂತ್ರಗಳು ತೆಲಂಗಾಣದಲ್ಲಿ ನಡೆಯುವುದಿಲ್ಲ’ ಎಂದು ವಿಧಾನ ಪರಿಷತ್‌ ಸದಸ್ಯೆಯೂ ಆಗಿರುವ ಕವಿತಾ ಅವರು ಹೇಳಿದ್ದಾರೆ.

ರಿಮಾಂಡ್‌ ವರದಿಯಲ್ಲಿ ವೈಎಸ್‌ಆರ್‌ ಕಾಂಗ್ರೆಸ್‌ ಸಂಸದ ಮಾಗುಂಟ ಶ್ರೀನಿವಾಸುಲು ಅವರ ಹೆಸರನ್ನೂ ಇ.ಡಿ ಉಲ್ಲೇಖಿಸಿದ್ದು, ಅದಕ್ಕೆ ಪ್ರತಿಕ್ರಿಯಿಸಿದ ರೆಡ್ಡಿ, ‘ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ನನ್ನ ಕುಟುಂಬ ಭಾಗಿಯಾಗಿಲ್ಲ’ ಎಂದಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿ ಉದ್ಯಮಿ ಅಮಿತ್‌ ಅರೋರಾ ಅವರನ್ನು ನವೆಂಬರ್‌ 29ರಂದು ಬಂಧಿಸಲಾಗಿತ್ತು. ಹಣ ಅಕ್ರಮ ವರ್ಗಾವಣೆಗೆ ಸಂಬಂಧಿಸಿ ವಿಚಾರಣೆ ನಡೆಸಲು ಅಮಿತ್‌ ಅವರನ್ನು 14 ದಿನಗಳ ಕಾಲ ತಮ್ಮ ವಶಕ್ಕೆ ನೀಡಬೇಕು ಎಂದು ಇ.ಡಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT