ಮಹಿಳೆ ಹೇಳಿಕೆ ಆಧರಿಸಿ ಕೆ.ಸಿ ವೇಣುಗೋಪಾಲ್, ಮಾಜಿ ಸಿಎಂ ಉಮ್ಮನ್ ಚಾಂಡಿ, ಸಂಸದ ಹಿಬಿ ಇದನ್, ಮಾಜಿ ಸಚಿವ ಎ.ಪಿ ಅನಿಲ್ ಕುಮಾರ್, ಸಂಸದ ಅಡೂರ್ ಪ್ರಕಾಶ್ ಹಾಗೂ ಬಿಜೆಪಿ ಮುಖಂಡ ಎ.ಪಿ ಅಬ್ದುಲ್ ಕುಟ್ಟಿ ಸೇರಿದಂತೆ ಒಟ್ಟು ಆರು ಜನರ ಮೇಲೆ ಲೈಂಗಿಕ ಶೋಷಣೆ ಪ್ರಕರಣವನ್ನು ಸಿಬಿಐ ದಾಖಲಿಸಿಕೊಂಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಇದೇ ಮೊದಲ ಬಾರಿಗೆ ಪ್ರಮುಖ ಆರೋಪಿ ವೇಣುಗೋಪಾಲ್ ಅವರನ್ನು ಸುದೀರ್ಘ ವಿಚಾರಣೆ ನಡೆಸಿದೆ.