<p><strong>ನವದೆಹಲಿ</strong>: 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಸಲುವಾಗಿ ತಮ್ಮ ನಡುವಿನ ಎಲ್ಲ ಭಿನ್ನಾಭಿಪ್ರಾಯಗಳನ್ನು ಮರೆತು ಒಂದಾಗಬೇಕು ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ವಿರೋಧ ಪಕ್ಷಗಳನ್ನು ಮಂಗಳವಾರ ಒತ್ತಾಯಿಸಿದ್ದಾರೆ.</p>.<p>ಅಲ್ಲದೇ, ದೆಹಲಿ ಅಬಕಾರಿ ನೀತಿ–2021ರಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಕೇಂದ್ರದ ತನಿಖಾ ಸಂಸ್ಥೆಗಳಿಂದ ದಾಳಿಗೆ ಒಳಗಾಗಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಜೊತೆಗೆ ನಿಲ್ಲದಿರುವ ಕಾಂಗ್ರೆಸ್ನ ನಡೆಯನ್ನು ಸಹ ಅವರು ಟೀಕಿಸಿದ್ದಾರೆ.</p>.<p>ಪಕ್ಷದ ಅಲ್ಪಸಂಖ್ಯಾತರ ಘಟಕದ ಸಭೆಯಲ್ಲಿ ಮಾತನಾಡಿದ ಅವರು, ‘ಅರವಿಂದ ಕೇಜ್ರಿವಾಲ್ ಅವರೊಂದಿಗೆ ಕಾಂಗ್ರೆಸ್ಗೆ ಭಿನ್ನಾಭಿಪ್ರಾಯಗಳಿರಬಹುದು. ಆದರೆ, ಆ ಪಕ್ಷದೊಂದಿಗೆ ನಿಲ್ಲಬೇಕಾದುದು ನಿಮ್ಮ ಕರ್ತವ್ಯ. ನಮ್ಮ ನಿಜವಾದ ಹೋರಾಟ ಬಿಜೆಪಿ ಹಾಗೂ ಕೋಮು ಶಕ್ತಿಗಳ ವಿರುದ್ಧ’ ಎಂದರು.</p>.<p>‘ಪ್ರತ್ಯಕ್ಷವಾಗಲಿ, ಪರೋಕ್ಷವಾಗಲಿ ಕೋಮುಶಕ್ತಿಗಳಿಗೆ ಲಾಭವಾಗುವಂತಹ ಯಾವುದೇ ನಡೆ ನಮ್ಮದಾಗಬಾರದು. ಪ್ರತಿಯೊಬ್ಬರೂ ಈ ಅಂಶವನ್ನು ನೆನಪಿನಲ್ಲಿಡಬೇಕು’ ಎಂದು ಪವಾರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: 2024ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಸಲುವಾಗಿ ತಮ್ಮ ನಡುವಿನ ಎಲ್ಲ ಭಿನ್ನಾಭಿಪ್ರಾಯಗಳನ್ನು ಮರೆತು ಒಂದಾಗಬೇಕು ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ವಿರೋಧ ಪಕ್ಷಗಳನ್ನು ಮಂಗಳವಾರ ಒತ್ತಾಯಿಸಿದ್ದಾರೆ.</p>.<p>ಅಲ್ಲದೇ, ದೆಹಲಿ ಅಬಕಾರಿ ನೀತಿ–2021ರಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಕೇಂದ್ರದ ತನಿಖಾ ಸಂಸ್ಥೆಗಳಿಂದ ದಾಳಿಗೆ ಒಳಗಾಗಿರುವ ಆಮ್ ಆದ್ಮಿ ಪಕ್ಷದ (ಎಎಪಿ) ಜೊತೆಗೆ ನಿಲ್ಲದಿರುವ ಕಾಂಗ್ರೆಸ್ನ ನಡೆಯನ್ನು ಸಹ ಅವರು ಟೀಕಿಸಿದ್ದಾರೆ.</p>.<p>ಪಕ್ಷದ ಅಲ್ಪಸಂಖ್ಯಾತರ ಘಟಕದ ಸಭೆಯಲ್ಲಿ ಮಾತನಾಡಿದ ಅವರು, ‘ಅರವಿಂದ ಕೇಜ್ರಿವಾಲ್ ಅವರೊಂದಿಗೆ ಕಾಂಗ್ರೆಸ್ಗೆ ಭಿನ್ನಾಭಿಪ್ರಾಯಗಳಿರಬಹುದು. ಆದರೆ, ಆ ಪಕ್ಷದೊಂದಿಗೆ ನಿಲ್ಲಬೇಕಾದುದು ನಿಮ್ಮ ಕರ್ತವ್ಯ. ನಮ್ಮ ನಿಜವಾದ ಹೋರಾಟ ಬಿಜೆಪಿ ಹಾಗೂ ಕೋಮು ಶಕ್ತಿಗಳ ವಿರುದ್ಧ’ ಎಂದರು.</p>.<p>‘ಪ್ರತ್ಯಕ್ಷವಾಗಲಿ, ಪರೋಕ್ಷವಾಗಲಿ ಕೋಮುಶಕ್ತಿಗಳಿಗೆ ಲಾಭವಾಗುವಂತಹ ಯಾವುದೇ ನಡೆ ನಮ್ಮದಾಗಬಾರದು. ಪ್ರತಿಯೊಬ್ಬರೂ ಈ ಅಂಶವನ್ನು ನೆನಪಿನಲ್ಲಿಡಬೇಕು’ ಎಂದು ಪವಾರ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>