ಹೈದರಾಬಾದ್ (ಪಿಟಿಐ): ತೆಲಂಗಾಣದ ಆಡಳಿತಾರೂಢ ಬಿಆರ್ಎಸ್ ಪಕ್ಷವು ಖಮ್ಮಂ ಪಟ್ಟಣದಲ್ಲಿ ಬುಧವಾರ ಸಾರ್ವಜನಿಕ ಸಭೆ ಆಯೋಜಿಸಿದ್ದು, ಇದರಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಮತ್ತು ಸಿಪಿಐ ನಾಯಕ ಡಿ.ರಾಜಾ ಅವರು ಪಾಲ್ಗೊಳ್ಳಲಿದ್ದಾರೆ.