ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಮಹಾನ್ ಸುಳ್ಳುಗಾರ: ಕೇಂದ್ರ ಸಚಿವ ಅನುರಾಗ್

Last Updated 22 ಆಗಸ್ಟ್ 2022, 13:37 IST
ಅಕ್ಷರ ಗಾತ್ರ

ಶಿಮ್ಲಾ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಹಾನ್ ಸುಳ್ಳುಗಾರ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಸೋಮವಾರ ಆರೋಪಿಸಿದ್ದಾರೆ.

ದೆಹಲಿಯ ಅಬಕಾರಿ ನೀತಿ ಜಾರಿಯಲ್ಲಿ ಅಕ್ರಮವಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ಹಾಗೂ ಎಎಪಿ ಮುಖಂಡರ ನಡುವಣ ವಾಕ್ಸಮರ ಸೋಮವಾರ ಮತ್ತಷ್ಟು ತೀವ್ರಗೊಂಡಿತು.

ಬಿಜೆಪಿಗೆ ಸೇರಿದರೆ ಸಿಬಿಐ ಹಾಗೂ ಇ.ಡಿ ಸೇರಿದಂತೆ ಎಲ್ಲ ಪ್ರಕರಣಗಳನ್ನು ಕೈಬಿಡುವುದಾಗಿ ಬಿಜೆಪಿ ಆಮಿಷ ಒಡ್ಡಿರುವುದಾಗಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆರೋಪಿಸಿದ್ದಾರೆ.

ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ ನಾಯಕ ಅನುರಾಗ್ ಠಾಕೂರ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಸಚಿವರು ಮಹಾನ್ ಸುಳ್ಳುಗಾರರು ಎಂದು ವಾಗ್ದಾಳಿ ಮಾಡಿದ್ದಾರೆ.

ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯಲ್ಲಿ ಮಾತನಾಡಿದ ಅನುರಾಗ್, ದೆಹಲಿಯ ಎಎಪಿ ಮಾದರಿ ಸರ್ಕಾರದ ಆಡಳಿತವು ಸಂಪೂರ್ಣ ವೈಫಲ್ಯ ಕಂಡಿದೆ. ಮೊಹಲ್ಲಾ ಕ್ಲಿನಿಕ್ ಮೊಹಲ್ಲಾ ಮದ್ಯ ಮಾರಾಟ ಕೇಂದ್ರವಾಗಿ ಮಾರ್ಪಾಡುಗೊಂಡಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT