ಬಿಜೆಪಿಗೆ ಸೇರಿದರೆ ಸಿಬಿಐ ಹಾಗೂ ಇ.ಡಿ ಸೇರಿದಂತೆ ಎಲ್ಲ ಪ್ರಕರಣಗಳನ್ನು ಕೈಬಿಡುವುದಾಗಿ ಬಿಜೆಪಿ ಆಮಿಷ ಒಡ್ಡಿರುವುದಾಗಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆರೋಪಿಸಿದ್ದಾರೆ.
ಇದಕ್ಕೆ ತಿರುಗೇಟು ನೀಡಿರುವ ಬಿಜೆಪಿ ನಾಯಕ ಅನುರಾಗ್ ಠಾಕೂರ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಅವರ ಸಚಿವರು ಮಹಾನ್ ಸುಳ್ಳುಗಾರರು ಎಂದು ವಾಗ್ದಾಳಿ ಮಾಡಿದ್ದಾರೆ.
ಹಿಮಾಚಲ ಪ್ರದೇಶದ ಕಾಂಗ್ರಾ ಜಿಲ್ಲೆಯಲ್ಲಿ ಮಾತನಾಡಿದ ಅನುರಾಗ್, ದೆಹಲಿಯ ಎಎಪಿ ಮಾದರಿ ಸರ್ಕಾರದ ಆಡಳಿತವು ಸಂಪೂರ್ಣ ವೈಫಲ್ಯ ಕಂಡಿದೆ. ಮೊಹಲ್ಲಾ ಕ್ಲಿನಿಕ್ ಮೊಹಲ್ಲಾ ಮದ್ಯ ಮಾರಾಟ ಕೇಂದ್ರವಾಗಿ ಮಾರ್ಪಾಡುಗೊಂಡಿದೆ ಎಂದು ಹೇಳಿದ್ದಾರೆ.
ಕೇಜ್ರಿವಾಲ್ ಅಬಕಾರಿ ಹಗರಣದ ಸೂತ್ರಧಾರಿಯಾಗಿದ್ದು, ಸಿಸೋಡಿಯಾ ಪ್ರಮುಖ ಆರೋಪಿಯಾಗಿದ್ದಾರೆ. ಇದುವರೆಗೂ ಹಗರಣಕ್ಕೆ ಸಂಬಂಧಿಸಿದಂತೆ ಸ್ಪಷ್ಟವಾದ ಉತ್ತರವನ್ನು ಕೊಟ್ಟಿಲ್ಲ ಎಂದು ಹೇಳಿದರು.