ಸೋಮವಾರ, 29 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಜ್ರಿವಾಲ್ ಭ್ರಷ್ಟಾಚಾರದ ಎಲ್ಲ ದಾಖಲೆಗಳನ್ನು ಮುರಿಯುತ್ತಿದ್ದಾರೆ: ಬಿಜೆಪಿ

Last Updated 22 ಆಗಸ್ಟ್ 2022, 9:38 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಭ್ರಷ್ಟಾಚಾರಗಳ ಎಲ್ಲ ದಾಖಲೆಗಳನ್ನು ಮುರಿಯುತ್ತಿದ್ದಾರೆ ಎಂದು ಬಿಜೆಪಿ ವ್ಯಂಗ್ಯ ಮಾಡಿದೆ.

ಬಿಜೆಪಿ ವಿರುದ್ಧ ಸೋಮವಾರ ಗಂಭೀರ ಆರೋಪ ಮಾಡಿರುವ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ಬಿಜೆಪಿ ಪಕ್ಷಕ್ಕೆ ಸೇರಿದರೆ ಸಿಬಿಐ, ಜಾರಿ ನಿರ್ದೇಶನಾಲಯ ಸೇರಿದಂತೆ ಎಲ್ಲ ಪ್ರಕರಣಗಳನ್ನು ಕೈಬಿಡುವುದಾಗಿ ಆಮಿಷ ಒಡ್ಡಿರುವುದಾಗಿ ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ, ಅಬಕಾರಿ ನೀತಿ ಸಮಿತಿಯ ಶಿಫಾರಸಿಗೂ ಮತ್ತು ದೆಹಲಿ ಜಾರಿಗೊಳಿಸಿರುವ ಅಬಕಾರಿ ನೀತಿಗೂ ಸಾಕಷ್ಟು ವ್ಯತ್ಯಾಸವಿದೆ ಎಂದು ಹೇಳಿದ್ದಾರೆ.

ಭ್ರಷ್ಟಾಚಾರ ಆರೋಪದ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮೌನವು ಅವರು ಅಪ್ರಾಮಾಣಿಕ ಎಂಬುದನ್ನು ಸಾಬೀತು ಮಾಡುತ್ತದೆ ಎಂದು ವಾಗ್ದಾಳಿ ನಡೆಸಿದರು.

ಮನೀಶ್ ಸಿಸೋಡಿಯಾ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಅವರು ಹೇಳಿದರು. ಭ್ರಷ್ಟಾಚಾರದಲ್ಲಿ ಕೇಜ್ರಿವಾಲ್ ಎಲ್ಲ ದಾಖಲೆಗಳನ್ನು ಮುರಿಯುತ್ತಿದ್ದಾರೆ. ದೆಹಲಿ ಜನರು ಅವರ ಸೊಕ್ಕನ್ನು ಮುರಿಯಲಿದ್ದಾರೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT